Homeಮುಖಪುಟಹೈದರಾಬಾದ್ - 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಯ ಬಂಧನ ನಡೆದಿಲ್ಲ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಯು ಕೃತ್ಯವನ್ನು ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಅಪರಾಧ ನಡೆದ ಐದು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಟೀಕೆಗಳು ಹೆಚ್ಚಾಗುತ್ತಿದ್ದಂತೆ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ ಮಹೇಂದರ್ ರೆಡ್ಡಿ ಅವರು ಹೈದರಾಬಾದ್, ರಾಚಕೊಂಡ ಮತ್ತು ಸೈಬರಾಬಾದ್‌ನ ಎಲ್ಲಾ ಹಿತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಆರೋಪಿಯ ಪತ್ತೆಗೆ ಮೂರು ಪೊಲೀಸ್ ಕಮಿಷನರೇಟ್‌ಗಳಾದ್ಯಂತ ಸಾವಿರಾರು ಪೊಲೀಸರು ತೀವ್ರ ಅನ್ವೇಷಣೆಯಲ್ಲಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

“ಆರೋಪಿ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸಿದ್ದಾನೆ ಎಂದು ತಿಳಿದ ನಂತರ, ಸೋಮವಾರದಿಂದ ಹೈದರಾಬಾದ್, ರಾಚಕೊಂಡ, ಸೈಬರಾಬಾದ್ ಮತ್ತು ಸುತ್ತಮುತ್ತಲಿನ ಎಲ್ಲಾ ಮದ್ಯದಂಗಡಿಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಅಂತೆಯೇ, ಎಲ್ಲಾ ಬಸ್ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳಲ್ಲಿ ರಾತ್ರಿ ಸಮಯದಲ್ಲಿ ನಿರಂತರವಾಗಿ ಶೋಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಯಶಸ್ಸು ಸಿಕ್ಕಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಮದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶೋಧ ಕಾರ್ಯಾಚರಣೆಯನ್ನು ಸಂಘಟಿಸಲು ಹೈದರಾಬಾದ್ ಪೊಲೀಸರ ಬಳಿ ತನ್ನ ವಿಶೇಷ ಕಾರ್ಯಾಚರಣೆ ತಂಡವನ್ನು (ಎಸ್‌ಒಟಿ) ಸಂಪೂರ್ಣವಾಗಿ ಇರಿಸುವಂತೆ ಡಿಜಿಪಿ ಎಂ ಮಹೇಂದರ್ ರೆಡ್ಡಿ ಅವರು ರಾಚಕೊಂಡ ಆಯುಕ್ತ ಮಹೇಶ್ ಭಾಗವತ್ ಅವರಿಗೆ ಸೂಚಿಸಿದ್ದಾರೆ. ಅಲ್ಲದೇ, ಸೈಬರಾಬಾದ್ ಪೊಲೀಸರು ಮತ್ತು ಐದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಜಾಗರೂಕರಾಗಿರಬೇಕು, ತಲೆಮರೆಸಿಕೊಂಡಿರುವ ಶಂಕಿತನ ಬಗ್ಗೆ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

ಆರೋಪಿಯ ಛಾಯಾಚಿತ್ರವನ್ನು ಎಲ್ಲಾ ಪೊಲೀಸರಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆರೋಪಿಯ ಎರಡು ಕೈಗಳಲ್ಲಿ ‘ಮೌನಿಕಾ’ ಎಂಬ ಹೆಸರಿನ ಟ್ಯಾಟೂ ಇದೆ ಎಂದು ಪೊಲೀಸರು ಹೇಳಿದ್ದಾರೆ. ಐದರಿಂದ ಆರು ಅಡಿ ಎತ್ತರವಿರುವ ವ್ಯಕ್ತಿಯೂ ಉದ್ದ ಕೂದಲನ್ನು ಬಿಟ್ಟಿದ್ದು, ಅದನ್ನು ರಬ್ಬರ್‌ ಬ್ಯಾಂಡ್‌ ಅಲ್ಲಿ ಕಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...