Homeಮುಖಪುಟಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಮಾಡಿದ ಕರ್ನಾಟಕ ಹೈಕೋರ್ಟ್‌

ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಮಾಡಿದ ಕರ್ನಾಟಕ ಹೈಕೋರ್ಟ್‌

- Advertisement -
- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ, ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಲು ‘ಕೇರಳ ಹೈಕೋರ್ಟ್ ನೀಡಿದ್ದ ತೀರ್ಪನ್ನು’ ಅವಲಂಬಿಸಿತು. ಈ ತೀರ್ಪಿನಲ್ಲಿ ಕೇರಳ ಹೈಕೋರ್ಟ್‌ ‘‘ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವುದು ಭಾರತ ಸರ್ಕಾರ ತೆಗೆದುಕೊಂಡ ನೀತಿ ನಿರ್ಧಾರವಾಗಿದ್ದು, ನ್ಯಾಯಾಲಯದ ಹಸ್ತಕ್ಷೇಪ ಅಗತ್ಯವಿಲ್ಲ” ಎಂದು ಹೇಳಿತ್ತು.

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯಲ್ಲಿ, ಮಂಗಳೂರಿನ ವಿಮಾನ ನಿಲ್ದಾಣ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು, ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡುವ ಬಿಡ್‌ಗೆ ಅನುಮೋದನೆ ನೀಡುವ 2019 ರ ಕ್ಯಾಬಿನೆಟ್ ನಿರ್ಧಾರವನ್ನು ರದ್ದುಗೊಳಿಸುವಂತೆ ನ್ಯಾಯಾಲಯದಲ್ಲಿ ಕೋರಲಾಗಿತ್ತು.

ಅಷ್ಟೆ ಅಲ್ಲದೆ, ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿತ್ತು. ಈ ನಿರ್ಧಾವು ಕಾನೂನುಬಾಹಿರವಾಗಿದ್ದು, ‘ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆ-1994’ ಯನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಾಯಿದೆಯ ಸೆಕ್ಷನ್ 12 ಅನ್ನು ಉಲ್ಲೇಖಿಸಿದ್ದರು. ವಿಮಾನ ನಿಲ್ದಾಣದ ಆವರಣವನ್ನು ಗುತ್ತಿಗೆ ಪಡೆಯಬಹುದು ಆದರೆ, ಈಗ ಇಡೀ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗಾಗಿ ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಗುತ್ತಿಗೆ ನೀಡಿದ ಒಪ್ಪಂದವನ್ನು ಉಲ್ಲೇಖಿಸಿ, ಸರ್ಕಾರದೊಂದಿಗೆ ಯಾವುದೇ ಆದಾಯ ಹಂಚಿಕೆ ಇಲ್ಲ ಮತ್ತು ಪ್ರತಿ ಪ್ರಯಾಣಿಕರ ಶುಲ್ಕದ ಮೇಲೆ ಗುತ್ತಿಗೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

“ರನ್‌ವೇಗಳು, ಟ್ಯಾಕ್ಸಿವೇಗಳು ಮತ್ತು ವಿಮಾನಗಳನ್ನು ರಕ್ಷಿಸುವ ಫೈರ್‌ ಕಟ್ಟಡಗಳನ್ನು ಸಹ ಗುತ್ತಿಗೆಗೆ ನೀಡಲಾಗಿದೆ. ಇವು ಏರ್ ಟ್ರಾಫಿಕ್ ಸೇವೆಯ ಭಾಗವಾಗಿದೆ, ಅವುಗಳನ್ನು ಯಾರೂ ಗುತ್ತಿಗೆಗೆ ನೀಡುವುದಿಲ್ಲ … ವಾಸ್ತವವಾಗಿ, ವಾಯುಯಾನ ಸೇವೆಗಳ ಮೇಲಿನ ಸಂಪೂರ್ಣ ನಿಯಂತ್ರಣವನ್ನು ಅವರಿಗೆ ನೀಡಲಾಗಿದೆ, ಇದು ಎಎಐ ಕಾಯ್ದೆಗೆ ವಿರುದ್ಧವಾಗಿದೆ” ಎಂದು ಅವರು ವಾದಿಸಿದ್ದಾರೆ.

“ವಿಮಾನ ನಿಲ್ದಾಣವನ್ನು ಮೂರನೇ ವ್ಯಕ್ತಿಗೆ ನೀಡಲಾಗಿದೆ, ಇದು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯ ನೀತಿಗೆ ಅನುಗುಣವಾಗಿಲ್ಲ. ಇದು ಪಾಲುದಾರಿಕೆಯಲ್ಲ ಬದಲಾಗಿ ಎಲ್ಲವನ್ನೂ ಅವರಿಗೆ ನೀಡುವುದಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಅರ್ಜಿಯನ್ನು ವಿರೋಧಿಸಿ, ಒಕ್ಕೂಟ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂಬಿ ನರಗುಂದ ಹಾಜರಾಗಿದ್ದರು. ಅರ್ಜಿದಾರರ ಒಕ್ಕೂಟದ ಒಂದು ಶಾಖೆಯು ಕೇರಳ ಹೈಕೋರ್ಟ್‌ಗೆ ಕೂಡಾ ಅರ್ಜಿ ಸಲ್ಲಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...