Homeಮುಖಪುಟನ್ಯಾಯಮಂಡಳಿಗಳ ನೇಮಕದಲ್ಲಿ ಪ್ರಮಾದ; ಕೇಂದ್ರಕ್ಕೆ ಸುಪ್ರೀಂ ಚಾಟಿ

ನ್ಯಾಯಮಂಡಳಿಗಳ ನೇಮಕದಲ್ಲಿ ಪ್ರಮಾದ; ಕೇಂದ್ರಕ್ಕೆ ಸುಪ್ರೀಂ ಚಾಟಿ

‘ಸರ್ಕಾರದ ನಡೆ ದುರದೃಷ್ಟಕರ’ ಎಂದಿರುವ ಸಿಜೆಐ ಎನ್‌.ವಿ.ರಮಣ, "ಸಂದರ್ಶನಗಳನ್ನು ನಡೆಸಲು ನಾವು ರಾಷ್ಟ್ರಾದ್ಯಂತ ಪ್ರವಾಸ ಕೈಗೊಂಡು ಸಮಯವನ್ನು ವ್ಯರ್ಥ ಮಾಡಿದ್ದೇವೆಯೇ?" ಎಂದು ಕೇಳಿದ್ದಾರೆ.

- Advertisement -
- Advertisement -

ನ್ಯಾಯಾಧೀಕರಣಗಳಿಗೆ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ಪ್ರಮಾದ ಎಸಗುತ್ತಿದೆ ಎಂದಿರುವ ಸರ್ವೋಚ್ಚ ನ್ಯಾಯಾಲಯ, ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತನಗೆ ಬೇಕಾದವರನ್ನಷ್ಟೇ ಆಯ್ಕೆ ಮಾಡಿಕೊಳ್ಳುವ (cherry picking) ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದಿರುವ ಸುಪ್ರೀಂ ಕೋರ್ಟ್‌, ನೇಮಕಾತಿಗೆ ಸಂಬಂಧಿಸಿದಂತೆ ಎರಡು ವಾರಗಳ ಗಡುವು ನೀಡಿದ್ದು, “ನೇಮಕಾತಿಯೊಂದಿಗೆ ಹಾಜರಾಗಬೇಕು” ಎಂದು ಆದೇಶಿಸಿದೆ.

“ನ್ಯಾಷನಲ್‌ ಕಂಪೆನಿ ಲಾ ಟ್ರಿಬ್ಯುನಲ್‌ (ಎನ್‌ಸಿಎಲ್‌ಟಿ) ನೇಮಕಾತಿಗಳನ್ನು ನೋಡಿದೆ. ಶಿಫಾರಸುಗಳನ್ನು ಈಗಾಗಲೇ ಮಾಡಲಾಗಿದೆ. ಆದರೆ ನೇಮಕಾತಿಯಲ್ಲಿ ‘ಚೆರ್‍ರಿ ಪಿಕ್ಕಿಂಗ್’ ಕಂಡು ಬಂದಿದೆ. ಇದು ಯಾವ ರೀತಿಯ ಆಯ್ಕೆ ಪ್ರಕ್ರಿಯೆ? ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಸದಸ್ಯರ ವಿಚಾರದಲ್ಲೂ ಹೀಗೆಯೇ ನಡೆದುಕೊಳ್ಳಲಾಗಿದೆ” ಎಂದು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಬೇಸರ ವ್ಯಕ್ತಪಡಿಸಿದ್ದಾರೆ.

“ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ನೋಡಿ ನಮಗೆ ಅಸಂತೋಷ ಉಂಟಾಗಿದೆ” ಎಂದಿರುವ ಅವರು, “ನಾನು ಕೂಡ ಎನ್‌ಸಿಎಲ್‌ಟಿ ಆಯ್ಕೆಯ ಭಾಗವಾಗಿದ್ದೆ. ನಾವು 544 ಮಂದಿಯ ಸಂದರ್ಶನ ನಡೆಸಿ, 11 ಮಂದಿ ನ್ಯಾಯಾಂಗ ಸದಸ್ಯರನ್ನು, 10 ಮಂದಿ ತಾಂತ್ರಿಕ ಸದಸ್ಯರನ್ನು ಶಿಫಾರಸು ಮಾಡಿದ್ದೇವೆ. ಇದರಲ್ಲಿ ಕೆಲವರನ್ನು ಮಾತ್ರ ಸರ್ಕಾರ ನೇಮಕ ಮಾಡಿದೆ. ಅನೇಕ ಹೆಸರುಗಳನ್ನು ಕಾಯ್ದಿರಿಸಲಾಗಿದೆ” ಎಂದಿದ್ದಾರೆ.

ಸರ್ಕಾರದ ನಡೆ ದುರದೃಷ್ಟಕರ ಎಂದಿರುವ ನ್ಯಾಯಮೂರ್ತಿ ಎನ್‌.ವಿ.ರಮಣ, “ಸಂದರ್ಶನಗಳನ್ನು ನಡೆಸಲು ನಾವು ರಾಷ್ಟ್ರಾದ್ಯಂತ ಪ್ರವಾಸ ಕೈಗೊಂಡಿದ್ದೆವು.  ನಾವು ನಮ್ಮ ಸಮಯವನ್ನು ವ್ಯರ್ಥ ಮಾಡಿದ್ದೇವೆಯೇ? ಸರ್ಕಾರ ಸಂದರ್ಶನಗಳನ್ನು ನೆಡೆಸಲು ಕೋರಿದ್ದರಿಂದ ಕೋವಿಡ್‌ ಬಿಕ್ಕಟ್ಟಿನ ನಡುವೆ ನಾವು ಪ್ರವಾಸ ಕೈಗೊಂಡಿದ್ದೆವು” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...