Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...