Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...