Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...