Homeಕರ್ನಾಟಕಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

ಪೆರಿಯಾರ್‌ ಪ್ರಶಸ್ತಿಗೆ ಮೂಡ್ನಾಕೂಡು ಚಿನ್ನಸ್ವಾಮಿ ಆಯ್ಕೆ

- Advertisement -
- Advertisement -

ದ್ರಾವಿಡ ಚಳವಳಿಯ ನಾಯಕ ಇ.ವಿ.ರಾಮಸ್ವಾಮಿ ಅವರ ಹೆಸರಲ್ಲಿ ಕರ್ನಾಟಕ ವಿಚಾರವಾದಿಗಳ ವೇದಿಕೆ ನೀಡುವ ‘ಪೆರಿಯಾರ್‌ ಪ್ರಶಸ್ತಿ’ಗೆ ಈ ವರ್ಷ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್‌ 18ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

ಪೆರಿಯಾರ್‌ ನನ್ನ ಬದುಕಿನ ಭಾಗ: ಮೂಡ್ನಾಕೂಡು ಚಿನ್ನಸ್ವಾಮಿ

‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ಮೂಡ್ನಾಕೂಡು ಚಿನ್ನಸ್ವಾಮಿಯವರು, “ಭಾರತದ ಅಪೂರ್ವವಾದ ವಿಚಾರವಾದಿ ಪೆರಿಯಾರ್‌ ರಾಮಸ್ವಾಮಿಯವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕಳೆದ ಮೂವತ್ತೈದು ವರ್ಷಗಳಿಂದ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌, ಬುದ್ಧ, ಬಸವ, ಪೆರಿಯಾರ್‌, ಕುವೆಂಪು ಅವರಂತಹ ಮಹಾನೀಯರ ವಿಚಾರಗಳ ಕುರಿತೇ ಬರೆಯುತ್ತಾ, ಮಾತನಾಡುತ್ತಾ ಬಂದಿದ್ದೇನೆ. ಇವರೆಲ್ಲರೂ ನನ್ನ ಬದುಕಿನ ಭಾಗವಾಗಿದ್ದಾರೆ. ನಮಗೆಲ್ಲರಿಗೂ ಸರಿಯಾದ ಹಾದಿಯನ್ನು ತೋರಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಮುಂದುವರಿದು, “ಈ ಲೋಕದ ಮೊದಲ ವಿಚಾರವಾದಿ ಬುದ್ಧ. ಆತ ಯಾವುದೇ ಮೂಢನಂಬಿಕೆಯನ್ನೂ ನಂಬಲಿಲ್ಲ. ಕಣ್ಣಿಗೆ ಕಾಣಿಸದಿರುವುದನ್ನು ತಿರಸ್ಕರಿಸಿದ. ಅನುಭವದ ಮೂಲಕ ಕಂಡುಕೊಂಡ ಸತ್ಯಗಳನ್ನು ಹೇಳಿದ. ನಂತರ ಬಂದ ವಿಚಾರವಂತರಾದ ಬಸವಣ್ಣ, ಬಿರ್ಸಾಮುಂಡಾ, ಫುಲೆ, ಬಾಬಾಸಾಹೇಬರೆಲ್ಲರೂ ವೈದಿಕ ಧರ್ಮದ ಮೌಢ್ಯಗಳನ್ನು ನಿರಾಕರಿಸಿದರು. ಪೆರಿಯಾರ್‌ ಈ ನಿರಾಕರಣೆಯನ್ನು ಸ್ವಲ್ಪ ಒರಟಾಗಿ ಮಾಡಿದರು. ಈ ನೇರ ನುಡಿಗಳನ್ನು ಆ ಕಾಲದ ಜನರು ಸಹಿಸಿಕೊಂಡರು. ತಮಿಳು ನೆಲ ಅವರನ್ನು ಒಪ್ಪಿಕೊಂಡಿತು. ಜಗತ್ತಿಗೆ ಬೆಳಕನ್ನು ಬೀರುವ ಪೆರಿಯಾರ್‌ ಥರದ ಸತ್ಯವಾದಿಗಳು ಎಂದಿಗೂ ಉಳಿಯುತ್ತಾರೆ” ಎನ್ನುತ್ತಾರೆ ಚಿನ್ನಸ್ವಾಮಿ.

“ಕನ್ನಡಿಗರಾದ ಪೆರಿಯಾರ್‌ ತಮಿಳುನಾಡಿನಲ್ಲಿ ಹೆಚ್ಚು ಪ್ರಭಾವಿಸಿದರು. ಕನ್ನಡನಾಡಿನ ಬಹುತೇಕರು ತಮಿಳು ನೆಲದಲ್ಲಿ ಛಾಪು ಮೂಡಿಸಿದ್ದನ್ನು ನೋಡಬಹುದು. ಪೆರಿಯಾರ್‌‌, ಜಯಲಲಿತ, ರಜನಿಕಾಂತ್‌ ಅವರ ಸಾಧನೆಗಳು ಇದಕ್ಕೆ ಉದಾಹರಣೆ” ಎಂದರು.


ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...