HomeಮುಖಪುಟSC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ - NCRB ಮಾಹಿತಿ

SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

- Advertisement -
- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಪರಿಶಿಷ್ಟ ಜಾತಿಗಳ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಅಪರಾಧಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2020 ರಲ್ಲಿ ಕ್ರಮವಾಗಿ 9.4% ಮತ್ತು 9.3% ರಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಆದರೆ ವರದಿಯು ಮಹಿಳೆಯರ ವಿರುದ್ಧದ ಅಪರಾಧಗಳು 8.3% ರಷ್ಟು ಇಳಿಮುಖವಾಗಿದೆ ತಿಳಿಸಿದೆ.

ಕಳೆದ ವರ್ಷ ಒಟ್ಟು 50,291 ಅಪರಾಧಗಳು ಎಸ್ಸಿಗಳ ವಿರುದ್ಧ ನಡೆದಿದೆ ಎಂದು ದಾಖಲಾಗಿದೆ. 2019 ರಲ್ಲಿ ಈ ಸಂಖ್ಯೆ 45,961 ಆಗಿತ್ತು. ಈ ಮಧ್ಯೆ, 2020 ರಲ್ಲಿ ST ಗಳ ವಿರುದ್ಧ 8,272 ಅಪರಾಧಗಳು ನಡೆದಿದ್ದು, 2019 ರಲ್ಲಿ ಈ ಸಂಖ್ಯೆ 7,570 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

2020 ರಲ್ಲಿ ಎಸ್ಸಿಗಳ ವಿರುದ್ದ ನಡೆದ ಅಪರಾಧಗಳಲ್ಲಿ, ‘ಸಿಂಪಲ್ ಹರ್ಟ್’ ಎಂದು ಒಟ್ಟು 16,543 (32.9 %) ಅಪರಾಧಗಳು ಮತ್ತು ದೌರ್ಜನ್ಯಗಳು ನಡೆದಿದೆ. ಜೊತೆಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 4,273 (8.5%) ಅಪರಾಧಗಳು ಮತ್ತು 3,788 ಕ್ರಿಮಿನಲ್ ಬೆದರಿಕೆಗಳು ಎಸ್ಸಿಗಳ ವಿರುದ್ದ ನಡೆದಿದೆ.

ಎಸ್‌ಟಿಗಳ ವಿಷಯದಲ್ಲಿ ನಡೆದ ಒಟ್ಟು ಅಪರಾಧಗಳಲ್ಲಿ, ‘ಸಿಂಪಲ್ ಹರ್ಟ್’ ಎಂದು ಒಟ್ಟು 2,247(27.2%) ಅಪರಾಧಗಳು ಮತ್ತು ದೌರ್ಜನ್ಯಗಳು ನಡೆದಿದ್ದು, ಅತ್ಯಾಚಾರ ಅಪರಾಧಗಳು 1,137(13.7%) ಮಹಿಳೆಯರ ಮೇಲೆ ಹಲ್ಲೆ ನಡೆದಿರುವ 885 (10.7%) ಪ್ರಕರಣಗಳು ದಾಖಲಾಗಿವೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅತ್ಯಧಿಕ ಅಪರಾಧ ದಾಖಲಾಗಿದೆ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಲ್ಲಿ ಎಸ್‌ಸಿಗಳ ವಿರುದ್ಧ ಅತ್ಯಧಿಕ ಅಪರಾಧಗಳು ನಡೆದಿವೆ. ಅದರಲ್ಲೂ ಈ ರಾಜ್ಯಗಳ ನಗರಗಳಾದ ಕಾನ್ಪುರ ಮತ್ತು ಜೈಪುರದಲ್ಲಿ ಅತ್ಯಧಿಕ ಅಪರಾಧಗಳು ನಡೆದಿವೆ.

ಕೇರಳ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯದಗಳಲ್ಲಿ ಎಸ್ಟಿಗಳ ವಿರುದ್ಧ ಅತ್ಯಧಿಕ ಅಪರಾಧಗಳು ನಡೆದಿದೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ಮಹಿಳೆಯರ ವಿರುದ್ಧದ ಅಪರಾಧಗಳು

2020 ರಲ್ಲಿ ಒಟ್ಟು 3,71,503 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿದೆ. 2019 ಕ್ಕೆ ಹೋಲಿಸಿದರೆ ಇದು 8.3% ರಷ್ಟು ಇಳಿಕೆಯಾಗಿದೆ. 2019 ರಲ್ಲಿ 4,05,326 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿತ್ತು.

ಮಹಿಳೆಯರ ವಿರುದ್ದ ನಡೆದಿರುವ ಅಪರಾಧಗಳು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಅತಿ ಹೆಚ್ಚು ಏರಿಕೆಯಾಗಿದೆ.

ಮಹಿಳೆಯರ ಮೇಲೆ ನಡೆದ ಅಪರಾಧಗಳಲ್ಲಿ ಉತ್ತರ ಪ್ರದೇಶದಲ್ಲಿ ಅತಿದೊಡ್ಡ ಕುಸಿತ ದಾಖಲಾಗಿದೆ. 2019 ರಲ್ಲಿ 59,853 ಮಹಿಳೆಯರ ವಿರುದ್ದ ಅಪರಾಧಗಳು ನಡೆದರೆ, 2020 ರಲ್ಲಿ 49,385 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿದೆ.

ಇದನ್ನೂ ಓದಿ: ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ 

ದೆಹಲಿಯಲ್ಲಿ ಕೂಡಾ 2019 ರಲ್ಲಿ 13,395 ಅಪರಾಧಗಳು ನಡೆದರೆ, 2021 ರಲ್ಲಿ 10,093 ಅಪರಾಧಗಳು ಮಹಿಳೆಯರ ವಿರುದ್ದ ನಡೆದಿದೆ.

ಮಹಿಳೆಯರ ವಿರುದ್ದ ನಡೆದ ಒಟ್ಟು ಅಪರಾಧದಲ್ಲಿ, ‘ಪತಿ ಅಥವಾ ಅವರ ಸಂಬಂಧಿಕರ ಕ್ರೌರ್ಯ’ವೇ ಅತಿ ಹೆಚ್ಚು(30%) ಎಂದು ಅಂಕಿ ಅಂಶ ಹೇಳಿದೆ. ‘ಮಹಿಳೆಯ ಘನತೆಗೆ ಕುತ್ತು ತರುವ ಉದ್ದೇಶದಿಂದ ನಡೆದ ಹಲ್ಲೆ 23 %, ಮಹಿಳೆಯರ ಅಪಹರಣ 16.8 % ಮತ್ತು ಅತ್ಯಾಚಾರ 7.5% ನಡೆದಿದೆ ಎಂದು ಅಂಕಿ ಅಂಶ ಹೇಳಿದೆ.

ಎನ್‌ಸಿಆರ್‌ಬಿ ವರದಿಯು, ಕಳೆದ ವರ್ಷ ಮಾರ್ಚ್-ಮೇ ನಿಂದ ಲಾಕ್‌ಡೌನ್ ಸಮಯದಲ್ಲಿ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧ ಕಳ್ಳತನ, ದರೋಡೆ ಮತ್ತು ದೌರ್ಜನ್ಯದ ಅಡಿಯಲ್ಲಿ ಅಪರಾಧಗಳು ಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....