Homeಮುಖಪುಟಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮ ಲಾಭಕ್ಕಾಗಿ ಧರ್ಮವನ್ನು ಬಳಸುವ “ನಕಲಿ ಹಿಂದೂಗಳು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಸಿದ್ಧಾಂತವು ಬಿಜೆಪಿ-ಆರ್‌ಎಸ್‌ಎಸ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದು ಹೇಳಿದ್ದಾರೆ.

‘ಬಿಜೆಪಿ-ಆರ್‌ಎಸ್‌ಎಸ್ ಜನರು ತಮ್ಮದು ಹಿಂದೂ ಪಕ್ಷ ಎಂದು ಹೇಳುತ್ತಾರೆ. ಕಳೆದ 100-200 ವರ್ಷಗಳಲ್ಲಿ, ಮಹಾತ್ಮ ಗಾಂಧಿಯವರು ಹಿಂದೂ ಧರ್ಮವನ್ನು ಅರ್ಥಮಾಡಿಕೊಂಡು ಅದನ್ನು ಆಚರಿಸಿದ ವ್ಯಕ್ತಿ. ನಾವು ಅದನ್ನು ಗುರುತಿಸುತ್ತೇವೆ ಮತ್ತು ಬಿಜೆಪಿ – ಆರ್‌ಎಸ್‌ಎಸ್‌ನ ಜನರನನ್ನೂ ಗುರುತಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಹುತಾತ್ಮರ ಮಗ- ಹುತಾತ್ಮರಿಗೆ ಮಾಡುವ ಅವಮಾನವನ್ನು ಸಹಿಸುವುದಿಲ್ಲ: ರಾಹುಲ್ ಗಾಂಧಿ

“ಬಿಜೆಪಿ- ಆರ್‌ಎಸ್‌ಎಸ್‌ ಯಾವ ರೀತಿಯ ಹಿಂದೂಗಳು? ಅವರು ನಕಲಿ ಹಿಂದೂಗಳು. ಅವರು ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು, “ನೀವು ಮಹಾತ್ಮ ಗಾಂಧಿಯವರ ಚಿತ್ರವನ್ನು ನೋಡಿದಾಗ, ಅವರ ಸುತ್ತ ಇಬ್ಬರು-ಮೂವರು ಮಹಿಳೆಯರನ್ನು ಕಾಣುತ್ತಿರಿ. ಅದರೆ, ನೀವು ಮೋಹನ್ ಭಾಗವತ್ ಅವರೊಂದಿಗೆ ಮಹಿಳೆಯರು ಇರುವ ಚಿತ್ರವನ್ನು ನೋಡಿದ್ದೀರಾ..?” ಎಂದು ಪ್ರಶ್ನಿಸಿದ್ದಾರೆ.

“ಮೋಹನ್ ಭಾಗವತ್ ಅವರ ಸಂಘಟನೆಯು ಮಹಿಳೆಯರನ್ನು ಕಡೆಗಣಿಸುತ್ತದೆ. ಆದರೆ, ನಮ್ಮ ಸಂಘಟನೆಯು ಮಹಿಳೆಯರಿಗೆ ವೇದಿಕೆಯನ್ನು ನೀಡುತ್ತದೆ. ಮೋದಿ-ಆರೆಸ್ಸೆಸ್ ದೇಶದ ಯಾವುದೇ ಮಹಿಳೆಯನ್ನು ಪ್ರಧಾನಿಯನ್ನಾಗಿ ಮಾಡಿಲ್ಲ, ಕಾಂಗ್ರೆಸ್ ಮಾಡಿದೆ” ಎಂದು ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳಿಗೆ 11,000 ರೂ. ಜಮಾ ಮಾಡುವಂತೆ ತಿಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...