Homeಮುಖಪುಟಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಸತ್ಯದ ಹಾದಿಯಲ್ಲಿ ಲಕ್ಷಾಂತರ ತೊಂದರೆಗಳಿವೆ, ಆದರೆ ಸತ್ಯ ಯಾವಾಗಲೂ ಮೇಲುಗೈ ಸಾಧಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದು, "ಸಂಕಷ್ಟದ ಸಮಯದಲ್ಲಿ ಸೋನು ಸೋದ್ ಸಹಾಯ ಮಾಡಿದ ಲಕ್ಷಾಂತರ ಕುಟುಂಬಗಳ ಆಶೀರ್ವಾದ ಅವರ ಮೇಲಿದೆ" ಎಂದಿದ್ದಾರೆ.

- Advertisement -
- Advertisement -

ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಸಂಸ್ಥೆಯ ಮೇಲೆ ಐಟಿ ಕಾರ್ಯಾಚರಣೆ ಮಾಡಿದ್ದು, ಇದನ್ನು ಐಟಿ ‘ಸರ್ವೇ’ ಎಂದು ಕರೆದಿದೆ ಎಂದು ಮೂಲಗಳು ತಿಳಿಸಿವೆ.

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೋವಿಡ್ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಈವರೆಗೆ ಯಾವುದೇ ರಾಜಕೀಯ ಆಸಕ್ತಿಯನ್ನು ಸೂದ್ ವ್ಯಕ್ತಪಡಿಸಿಲ್ಲ. ಕೇಜ್ರಿವಾಲ್‌ ಅವರನ್ನು ಭೇಟಿಯಾದ ಬಳಿಕ ರಾಜಕೀಯ ಊಹಾಪೋಹಗಳು ಹರಿದಾಡುತ್ತಿವೆ. ಮುಂದಿನ ಪಂಜಾಬ್‌ ಚುನಾವಣೆಯಲ್ಲಿ ಸೂದ್‌ ಸ್ಪರ್ಧಿಸಬಹುದು ಎಂದು ವದಂತಿಗಳು ಹಬ್ಬಿವೆ. ಇದೆಲ್ಲ ಊಹಾಪೋಹಗಳಿಗೂ ಐಟಿ ಕಾರ್ಯಾಚರಣೆಗೂ ಸಂಬಂಧವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

“ರಾಜಕೀಯ ವಿದ್ಯಮಾನಗಳಿಗೂ ಐಟಿ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ. ಯಾರು ಯಾರನ್ನಾದರೂ ಭೇಟಿಯಾಗಬಹುದು. ಐಟಿ ಕೈಗೊಂಡಿರುವುದು ರೈಡ್ ಅಲ್ಲ, ಕೇವಲ ಸರ್ಚ್‌ ಅಷ್ಟೇ. ಐಟಿಯವರು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ” ಎಂದು ಬಿಜೆಪಿ ವಕ್ತಾರ ಆಸಿಫ್ ಭಾಮ್ಲಾ ಹೇಳಿದ್ದಾರೆ.

“ಸತ್ಯದ ಹಾದಿಯಲ್ಲಿ ಲಕ್ಷಾಂತರ ತೊಂದರೆಗಳಿವೆ, ಆದರೆ ಸತ್ಯ ಯಾವಾಗಲೂ ಮೇಲುಗೈ ಸಾಧಿಸುತ್ತದೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದು, “ಸಂಕಷ್ಟದ ಸಮಯದಲ್ಲಿ ಸೋನು ಸೋದ್ ಸಹಾಯ ಮಾಡಿದ ಲಕ್ಷಾಂತರ ಕುಟುಂಬಗಳ ಆಶೀರ್ವಾದ ಅವರ ಮೇಲಿದೆ” ಎಂದಿದ್ದಾರೆ. ಶಿವಸೇನೆ ಕೂಡ ಐಟಿ ಕಾರ್ಯಾಚರಣೆಯನ್ನು ಖಂಡಿಸಿದೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...