Homeಮುಖಪುಟಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಶುರುವಾಯಿತಾ ವಾಮಪ್ರಸ್ಥಾನ? ಹೇಗೆ ಅನುಮತಿ ನೀಡಿತು ಚುನಾವಣಾ ಆಯೋಗ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದ ಗುಹೆಯೊಳಗೆ ಥೇಟ್ ಸಾಧು ತರಹ ಕುಳಿತು ಧ್ಯಾನ ಮಾಡಿದ್ದಾರೆ. ಎಂದಿನಂತೆ ಫೋಟೊಗ್ರಾಫರ್, ಕ್ಯಾಮೆರಾಮನ್ ಜೊತೆಗಿದ್ದಾರೆ. ಫೋಟೋ, ಕ್ಲಿಪ್ಪಿಂಗ್ಸ್ ಹೊರಬಿದ್ದಿವೆ. ಈ ಕಾಲದಲ್ಲಿ ಭಕ್ತಿ ಇದ್ದವರು ಮನೆಯಲ್ಲೋ ಅಥವಾ ದೇವಸ್ಥಾನದ ಪರಿಧಿಯಲ್ಲೋ ಧ್ಯಾನ ಮಾಡುತ್ತಾರೆ. ಆದರೆ, ಗುಹೆಯೊಳಕ್ಕೆ ಹೊಕ್ಕ ಪ್ರಧಾನಿ ಯಾವ ಮಸೇಜ್ ಕೊಡುತ್ತಿದ್ದಾರೆ? ಅದು ಕೊನೆಯ ಹಂತದ ಚುನಾವಣೆ ಮುಗಿಯುವ ಮೊದಲೆ?

ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮುಂಜಾನೆ ಕೇದಾರನಾಥ ತಲುಪಿರುವ ಅವರು ಅಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಅಲ್ಲಿನ ಪಹಾರಿ ವೇಷಭೂಷಣದಲ್ಲಿ ಮಿಂಚಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಅಲ್ಲಿ ಶಿವನ ಪೂಜೆ ಕೈಗೊಂಡ ಅವರು, ಥೇಟ್ ಸಾಧುಗಳ ತರಹ ಖಾವಿ ಡ್ರೆಸ್ ಧರಿಸಿ ಗುಹೆಯೊಂದನ್ನು ಹೊಕ್ಕು ಆಧ್ಯಾತ್ಮ ಧ್ಯಾನ ಶುರು ಮಾಡಿದ್ದಾರೆ. ನಾಳೆ ಅವರು ಬದರಿನಾಥಕ್ಕೆ ಭೇಟಿ ಕೊಡಲಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದು ಈ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ. ಈ ಹಿಂದೆಯೂ ರುದ್ರಪ್ರಯಾಗದಲ್ಲಿರುವ ಈ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದರು. ಆದರೆ ಈ ರೀತಿ ದೇವಸ್ಥಾನದಲ್ಲಿ ಕುಳಿತು ಫೋಟೊ ತೆಗೆದು ದೇಶಕ್ಕೆಲ್ಲ ಹಂಚುವುದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಬರುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಈಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ಭೇಟಿ ನೀಡಿದ್ದು ಕುತೂಹಲಕರವಾಗಿದೆ. ಹೋಗುವ ಮಾರ್ಗದಲ್ಲಿ ತಾವು ತೆಗೆದ ಬೆಟ್ಟಸಾಲುಗಳ ಫೋಟೊಗಳನ್ನು ಟ್ವೀಟರ್‍ನಲ್ಲಿ ಹಾಕಿ ಕೊಂಡಿದ್ದಾರೆ.

ಅದಿರಲಿ, 59 ಸೀಟುಗಳ ಚುನಾವಣೆ ನಾಳೆ ನಡೆಯಲಿದೆ. ಮತದಾರರನ್ನು ಇಂಪ್ರೆಸ್ ಮಾಡಲು ಈ ಆಟವೇ ಎಂಬ ಸಂಶಯ ಕಾಡುತ್ತಿದೆ. ಒಂದು ವಾರದಿಂದ ವ್ಯಾಪಕ ಟ್ರೋಲ್ ಗೆ ಒಳಗಾಗುತ್ತಿರುವ ಅವರು ಕಾಲೆಳೆಸಿಕೊಳ್ಳಲು ಅವರು ಈಗ ಮತ್ತೆ ಆಹಾರವಾಗಿದ್ದಾರೆ. ನೆಗಿಟಿವ್ ಆರ್ ಪಾಸಿಟಿವ್ ಒಟ್ಟು ಲೈಮ್‍ಲೈಟ್‍ನಲ್ಲಿರಬೇಕು, ಸದಾ ಪ್ರಚಾರದಲ್ಲಿರಬೇಕು ಎಂಬ ಮೋದಿ ಬಯಕೆ ಮಾತ್ರ ಈಡೇರಿದೆ.

ಇದನ್ನು ಓದಿ: ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿಗೆ ವೈರಾಗ್ಯ ಭಾವ ಕಾಡುತ್ತಿದೆಯಾ ಅಥವಾ ಮತದಾರರ ಮೇಲೆ ಪ್ರಭಾವ ಬೀರಲು, ಪ್ರಚಾರ ಅಂತ್ಯದ ನಂತರವೂ ಸುದ್ದಿಯಲ್ಲಿರಲು ಈ ನಾಟಕವೋ ತಿಳಿಯುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...