Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...