Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...