Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...