Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...