- Advertisement -
- Advertisement -
ಟಿ-20 ಚುಟುಕು ಕ್ರಿಕೆಟ್ನ ನಾಯಕತ್ವವನ್ನು ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯ ಬಳಿಕ ತ್ಯಜಿಸುವುದಾಗಿ ನಾಯಕ ವಿರಾಟ್ ಕೊಹ್ಲಿ ಪ್ರಕಟಿಸಿದ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ, ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.
“ವಿರಾಟ್ ಭಾರತ ಕ್ರಿಕೆಟ್ ತಂಡದ ನಿಜವಾದ ಆಸ್ತಿಯಾಗಿದ್ದು, ತಂಡವನ್ನು ಉತ್ಸುಕತೆಯಿಂದ ಮುನ್ನಡೆಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್ನಲ್ಲೂ ಯಶಸ್ವಿಯಾದ ನಾಯಕ ವಿರಾಟ್. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ” ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಟಿ-20 ನಾಯಕನಾಗಿ ಅದ್ಭುತ ಪ್ರದರ್ಶನ ನೀಡಿದ ಕೊಹ್ಲಿಯವರಿಗೆ ಧನ್ಯವಾದ ಹೇಳುತ್ತೇವೆ. ಮುಂಬರುವ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಗೆಲ್ಲಲೆಂದು ಶುಭಕೋರುತ್ತೇವೆ. ಭಾರತಕ್ಕಾಗಿ ಅವರು ರನ್ ಗಳಿಕೆಯನ್ನು ಹೀಗೆಯೇ ಮುಂದುವರಿಸುತ್ತಾರೆ ಎಂದು ಭಾವಿಸುತ್ತೇವೆ” ಎಂದಿದ್ದಾರೆ.
ಇದನ್ನೂ ಓದಿ: ಟಿ-20 ನಾಯಕತ್ವ ತ್ಯಜಿಸಲು ವಿರಾಟ್ ಕೊಹ್ಲಿ ನಿರ್ಧಾರ