Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...