Homeಮುಖಪುಟ#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ಗ್ರಹಚಾರ ದಿವಸ - #अखंड_पनौती_दिवस - ಎಂಬ ಹ್ಯಾಶ್‌ಟ್ಯಾಗ್‌‌ ಕೂಡಾ ಟ್ರೆಂಡ್ ಆಗಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ದೇಶದ ಜನತೆ ಸಾಮಾಜಿಕ ಜಾಲತಾಣಗಳಲ್ಲಿ, ನಿರುದ್ಯೋಗದ ಬಗ್ಗೆ ಟ್ವೀಟ್ ಮಾಡಿ ಧ್ವನಿ ಎತ್ತಿದ್ದು, ರಾಷ್ಟ್ರೀಯ ನಿರುದ್ಯೋಗ ದಿನ(#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ಈ ಹ್ಯಾಶ್‌ಟ್ಯಾಗ್‌ಗಳು 4 ಲಕ್ಷ ಟ್ವೀಟ್‌ಗಳಿದ್ದರೆ, ರಾಷ್ಟ್ರೀಯ ನಿರುದ್ಯೋಗ ದಿನ ಎಂಬ ಹಿಂದಿ ಹ್ಯಾಶ್‌ಟ್ಯಾಗ್‌ ಇದುವರೆಗೂ 11 ಲಕ್ಷ ಟ್ವೀಟ್‌ಗಳಾಗಿದೆ. ಉಳಿದ ಟ್ವೀಟ್‌ಗಳು ಕೂಡಾ ಕ್ರಮವಾಗಿ ಐದರಿಂದ ಎಂಟು ಲಕ್ಷಗಳವರೆಗೂ ಟ್ವೀಟ್‌ ಆಗಿದೆ.

ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಟ್ವಿಟರ್‌ ಬಳಕೆದಾರ ವಿವೇಕ್ ಕುಮಾರ್‌ ಅವರು, “ನಿರುದ್ಯೋಗದ ಬಗ್ಗೆ ಇತ್ತೀಚಿನ ಎನ್‌ಸಿಆರ್‌ಬಿ ವರದಿ ಭಯಾನಕವಾಗಿದೆ. ಈ ವಿಷಯದ ಕುರಿತು ತುರ್ತು ಚಿಂತನೆಯ ಅಗತ್ಯವಿದ್ದು, ರಾಜಕೀಯ ಪಕ್ಷಗಳು ಈ ವಿಷಯವನ್ನು ಜವಾಬ್ದಾರಿಯಿಂದ ತೆಗೆದುಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ. ನಿರುದ್ಯೋಗ ಸಂಬಂಧಿ ಆತ್ಮಹತ್ಯೆಗಳು 2016 ರಿಂದ 2019 ರವರೆಗೆ 24% ಹೆಚ್ಚಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ವರದಿಯ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಮುಕ್ತಾರ್‌ ರಾವ್‌ ಅವರು, “ಆಗಸ್ಟ್ 2021 ರ ಸಾಂಕ್ರಾಮಿಕ ಸಮಯದಲ್ಲಿ ಸುಮಾರು 15 ಲಕ್ಷ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದೇ ಸಮಯ ಗ್ರಾಮೀಣ ಭಾಗದ ಸುಮಾರು 13 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಹಂಸರಾಜ್ ಮೀನಾ ಅವರು, “ಹಲೋ ಪ್ರಧಾನಿ ನರೇಂದ್ರ ಮೋದಿ, ನೀವು ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ. ಆದರೆ ನಿಮ್ಮ ಸರ್ಕಾರವು 7 ವರ್ಷಗಳಲ್ಲಿ 12.50 ಕೋಟಿ ಯುವಕರ ಉದ್ಯೋಗಗಳನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡಿದೆ. ಇದು ನೇರವಾಗಿ ಯುವಕರ ಭವಿಷ್ಯದ ಜೊತೆ ಮಾಡುವ ವಂಚನೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೀಶ್ ಆನಂದ್ ಅವರು, “ಪ್ರಧಾನಿಗೆ ಒಂದೇ ಒಂದು ಪ್ರಶ್ನೆ, 14 ಕೋಟಿ ಉದ್ಯೋಗಗಳು ಎಲ್ಲಿ?” ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಚುನಾವಣೆಯ ಪ್ರಣಾಳಿಕೆಯಲ್ಲಿ ಒಂದು ಕೋಟಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಜಾನ್ ಅವರು, “ರೈಲ್ವೇ ಇಲಾಖೆಯ ಗ್ರೂಪ್ ಡಿ ನೇಮಕಾತಿ ಪರೀಕ್ಷೆಯ ದಿನಾಂಕಕ್ಕಾಗಿ ಕಾಯುತ್ತಿದ್ದೇವೆ. ಈ ವರ್ಷದಲ್ಲಿ ಮುಗಿಯಬೇಕಿರುವ ಅನೇಕ ಪರೀಕ್ಷೆಗಳು ಇದೆ. ಆದರೆ ನಾವು ಅಂತಿಮವಾಗಿ ಮಾಡುವುದು ಕಾಯುವುದು ಕಾಯುವುದು ಮತ್ತು ಕಾಯುವುದಾಗಿದೆ” ಎಂದು ಹೇಳಿದ್ದಾರೆ.

ರೈಲ್ವೇ ಇಲಾಖೆಯ ಡಿಗ್ರೂಪ್‌ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಜೂನ್‌ನಲ್ಲಿ ಮುಂದೂಡಲಾಗಿತ್ತು. ಆದರೆ ಇನ್ನೂ ಕೂಡಾ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿಲ್ಲ. ಇದರಲ್ಲಿ 1 ಲಕ್ಷಕ್ಕೂ ಅಧಿಕ ಹುದ್ದೆಗಳಿದ್ದು, ಈಗಾಗಲೆ 1.25 ಲಕ್ಷಕ್ಕಿಂತಲೂ ಅಧಿಕ ಅಭ್ಯರ್ಥಿಗಳು ಅರ್ಜಿಸಲ್ಲಿಸಿದ್ದಾರೆ.

 

ಸೋನಿಯಾ ಅವರು, “ನಮ್ಮ ಪ್ರಧಾನಿಯ ಅವರು ‘ಗಜನಿ’ ಚಿತ್ರದ ಅಮೀರ್‌ ಖಾನ್ ತರ. ಅವರು ಚುನಾವಣೆ ಸಮಯದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತಿದ್ದಾರೆ” ಎಂದು ಬರೆದಿದ್ದಾರೆ.

ರೋಹಿತಾಶ್ ಅವರು, “ನಿರುದ್ಯೋಗವು ನಿರುದ್ಯೋಗಿ ಯುವಕರಿಗೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ವಲಯದಲ್ಲಿ ಉದ್ಯೋಗಗಳನ್ನು ಕಡಿಮೆ ಮಾಡಿರುವ ಮೋದಿ ಸರ್ಕಾರದ ತಂತ್ರಗಳು ನಿರುದ್ಯೋಗದ ಮೇಲೆ ದೊಡ್ಡ ಹೊಡೆತ ನೀಡಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...