Homeಮುಖಪುಟ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ - ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

- Advertisement -
- Advertisement -

ಬಿಜೆಪಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣ್ಯನ್‌ ಸ್ವಾಮಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ” ಎಂದು ಅವರು ಗುರುವಾರ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡುತ್ತಾ, ಸ್ವಂತ ಪಕ್ಷ ಮತ್ತು ಅದರ ನಾಯಕತ್ವದ ವಿರುದ್ಧ ಮಾತನಾಡುವುದು ಸುಬ್ರಮಣ್ಯನ್‌ ಸ್ವಾಮಿಯವರ ಸ್ವಾಭಾವ ಎಂದು ಹೇಳಿದ್ದರು.

“ಸುಬ್ರಮಣ್ಯನ್‌ ಸ್ವಾಮಿ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ. ಅವರು ಯಾವ ಪಕ್ಷದಲ್ಲಿದ್ದರೂ ಸ್ವತಂತ್ರ ರಾಜಕಾರಣಿಯಂತೆ ವರ್ತಿಸುತ್ತಾ, ತನ್ನ ಮನಸ್ಸಿಗೆ ಬಂದದ್ದನ್ನು ಹೇಳುತ್ತಾರೆ. ಅವರ ವಿಶ್ಲೇಷಣೆಯ ಆಧಾರದ ಮೇಲೆ, ಅವರು ವಿಷಯಗಳನ್ನು ಹೇಳುತ್ತಲೇ ಇರುತ್ತಾರೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಗೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದರು.

ಇದನ್ನೂ ಓದಿ: ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ಸಿದ್ದರಾಮಯ್ಯ ಅವರು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಸುಬ್ರಮಣ್ಯನ್‌ ಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ನೀಡಿರುವ ಹೇಳಿಕೆಗಳ ಬಗ್ಗೆ ವಿಧಾನ ಸಭೆಯಲ್ಲಿ ಹಂಚಿಕೊಂಡಿದ್ದರು.

ಈ ಬಗ್ಗೆ ವಾರ್ತಾಭಾರತಿಯ ಇಂಗ್ಲಿಷ್‌ ಪತ್ರಿಕೆ ವರದಿ ಮಾಡಿದ್ದ ಸುದ್ದಿಯನ್ನು ಹಂಚಿಕೊಂಡಿರುವ ಸುಬ್ರಮಣ್ಯನ್‌ ಸ್ವಾಮಿ, “ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಬ್ರಮಣಿಯನ್ ಸ್ವಾಮಿ ‘ಸ್ವತಂತ್ರ ರಾಜಕಾರಣಿ’ ಎಂದು ಕರೆದಿದ್ದಾರೆ. 3 ಬಾರಿ ಲೋಕಸಭೆ ಸೇರಿದಂತೆ ಆರು ಅವಧಿಯ ಸಂಸದನಾಗಿದ್ದು ಮತ್ತು ಎರಡು ಬಾರಿ ಮಂತ್ರಿಯಾಗಿದ್ದು, ‘ಬೂಟ್‌ ನೆಕ್ಕುವ ಮೂಲಕ ಅಲ್ಲ’. ಬದಲಾಗಿ ರೋಮಾಂಚಕ ಪ್ರಜಾಪ್ರಭುತ್ವಕ್ಕೆ ಅಗತ್ಯವಾದ ಸತ್ಯವನ್ನು ತಿಳಿಸಿ” ಎಂದು ಹೇಳಿದ್ದಾರೆ.

 

ಸುಬ್ರಮಣ್ಯನ್‌ ಅವರು ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, “ಸುಬ್ರಮಣ್ಯನ್‌ ಸ್ವಾಮಿ ಅವರನ್ನು ನಾನು ಸ್ವತಂತ್ರ ಚಿಂತಕ ಎಂದು ಹೇಳಿದ್ದೇನೆ. ನಾನೇನು ಅವರನ್ನು ಟೀಕಿಸಿಲ್ಲ. ನನ್ನ ಹೇಳಿಕೆ ‌ಖಂಡಿಸಿ ಟ್ವೀಟ್ ಮಾಡಿರುವ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’’ ಎಂದು ‌ಮುಖ್ಯಮಂತ್ರಿ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಸುಬ್ರಮಣ್ಯನ್‌ ಸ್ವಾಮಿ ಅವರು ಫೆಬ್ರವರಿಯಲ್ಲಿ ರಾಮಾಯಣವನ್ನು ಉಲ್ಲೇಖಿಸುವ ಮೂಲಕ ಭಾರತದಲ್ಲಿ ಪೆಟ್ರೋಲ್ ಬೆಲೆಯ ಹೆಚ್ಚಳದ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರು, “ಪೆಟ್ರೋಲ್ ಬೆಲೆ ರಾಮನ ಭಾರತದಲ್ಲಿ 92, ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂ.ಗಳು” ಎಂದು ಹೇಳಿದ್ದರು.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...