Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...