Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...