Homeಫ್ಯಾಕ್ಟ್‌ಚೆಕ್ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

- Advertisement -
- Advertisement -

ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವವರಲ್ಲಿ ಒಬ್ಬರಾದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಮುಸ್ಲಿಮರ ಸಹಾನುಭೂತಿ ಪಡೆಯಲು “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಿದ್ದಾರೆ ಎಂದಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ರಾಕೇಶ್ ಟಿಕಾಯತ್‌ ಕೃಷಿ ಕಾನೂನುಗಳ ವಿರುದ್ಧದ ಸಾರ್ವಜನಿಕ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾರೆ. ಅದೇ ಸಾರ್ವಜನಿಕ ಸಭೆಯಲ್ಲಿ ಹಿಂದೂ ರೈತರು ಕೋಪದಿಂದ ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದ್ದಾರೆ ಎಂದು ವಿಡಿಯೊ ಹಂಚಿಕೊಳ್ಳಲಾಗುತ್ತಿದ್ದು, ಇದು ನಿಜವೇ ಎಂಬುದನ್ನು ಈ ಸುದ್ದಿಯಲ್ಲಿ ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ‘ಪಂಜಾಬ್ ತಕ್’ ಸುದ್ದಿ ಚಾನೆಲ್ ಲೋಗೋ ಇದೆ. ಈ ವಿಡಿಯೊಕ್ಕಾಗಿ ‘ಪಂಜಾಬ್ ತಕ್’ ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಹುಡುಕಿದಾಗ, ‘ಪಂಜಾಬ್ ತಕ್’ ನ್ಯೂಸ್ ಚಾನೆಲ್ 05 ಸೆಪ್ಟೆಂಬರ್ 2021 ರಂದು ಇದನ್ನು ಪ್ರಕಟಿಸಿದೆ. ಈ ವಿಡಿಯೋ 05 ಸೆಪ್ಟೆಂಬರ್ 2021 ರಂದು ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಕಾರ್ಯಕ್ರಮದ ನೇರ ದೃಶ್ಯಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: ‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಂಜಾಬ್ ತಕ್’ ಸುದ್ದಿ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ 11:06 ನಿಮಿಷದಲ್ಲಿ, ರಾಕೇಶ್ ಟಿಕಾಯತ್ ಮಾತನಾಡಿರುವುದು ಇದು. “ಇಂತಹ (ಬಿಜೆಪಿ) ಸರ್ಕಾರಗಳು ದೇಶದಲ್ಲಿ ಮುಂದುವರಿದರೆ, ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತಾರೆ. ಹಿಂದೆ, ಟಿಕಾಯತ್ (ರಾಕೇಶ್ ಟಿಕಾಯತ್ ತಂದೆ ಮತ್ತು ಬಿಕೆಯು ಮಾಜಿ ಅಧ್ಯಕ್ಷ ಮಹೇಂದ್ರ ಸಿಂಗ್ ಟಿಕಾಯತ್) ಸಮಯದಲ್ಲಿ ಘೋಷಣೆಗಳನ್ನು ಕೂಗಲಾಗುತ್ತಿತ್ತು. ‘ಅಲ್ಲಾಹು ಅಕ್ಬರ್’ (ತಕ್ಷಣ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗುತ್ತದೆ), ‘ಅಲ್ಲಾಹು ಅಕ್ಬರ್ (ಮತ್ತೆ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗಿತ್ತದೆ). ಈ ‘ಅಲ್ಲಾಹು ಅಕ್ಬರ್-ಹರ ಹರ ಮಹಾದೇವ್’ ಘೋಷಣೆಗಳು ದೇಶದಲ್ಲಿ ಇದುವರೆಗೆ ನಡೆದ ಚಳುವಳಿಗಳಲ್ಲಿ ಘೋಷಿಸಲಾಗಿದೆ. ಭವಿಷ್ಯದಲ್ಲಿ ನಡೆಯುವ ಚಳುವಳಿಗಳಲ್ಲಿಯೂ ಈ ಘೋಷಣೆಗಳನ್ನು ಕೂಗಲಾಗುತ್ತದೆ. ನಮ್ಮ ಬಳಿ ಗಲಭೆಗಳು ಉದ್ಭವಿಸುವುದಿಲ್ಲ. ಅವರು ಜನರನ್ನು ಬೇರ್ಪಡಿಸಲು ಪ್ರಯತ್ನಿಸಿದರೆ, ನಾವು ಒಂದಾಗಲು ಪ್ರಯತ್ನಿಸುತ್ತೇವೆ. ಸುಳ್ಳು ಪ್ರಚಾರದಿಂದ ಜನರು ಮೋಸ ಹೋಗಬಾರದು” ಎಂದು ಹೇಳಿದ್ದಾರೆ.

ಇತರ ಕೆಲವು ಸುದ್ದಿ ವಾಹಿನಿಗಳು ರಾಕೇಶ್ ಟಿಕಾಯತ್ ಕಿಸಾನ್ ಮಹಾ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೀಡಿಯೋವನ್ನು ಪ್ರಕಟಿಸಿವೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಭಾಷಣ ಮಾಡಿದ ರಾಕೇಶ್ ಟಿಕಾಯತ್ ವಿಡಿಯೊವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ರಾಕೇಶ್ ಟಿಕಾಯತ್ ಅವರ ಅಲ್ಲಾ ಹೋ ಅಕ್ಬರ್ ‘ಘೋಷಣೆಯ ಕುರಿತು ಸಂಪೂರ್ಣ ಸ್ಪಷ್ಟತೆಯೊಂದಿಗೆ 07 ಸೆಪ್ಟೆಂಬರ್ 2021 ರಂದು ‘ಬಿಬಿಸಿ ನ್ಯೂಸ್ ಹಿಂದಿ’ಯಲ್ಲಿ’ ವಿಡಿಯೊವನ್ನು ಪ್ರಕಟಿಸಿದ್ದಾರೆ. ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಹಳುವಂತೆ, ರಾಕೇಶ್ ಟಿಕಾಯತ್ ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಿಲ್ಲ ಎಂದು ಹೇಳಬಹುದಾಗಿದೆ.

ಪ್ರತಿಪಾದನೆ: ರೈತ ಚಳುವಳಿಯ ನಾಯಕ ರಾಕೇಶ್ ಟಿಕಾಯತ್, ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದರೆ, ಹಿಂದೂ ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿದ್ದಾರೆ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಲಾಗಿರುವ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ರಾಕೇಶ್ ಟಿಕಾಯತ್ ಮುಜಾಫರ್ ನಗರದಲ್ಲಿ 05 ಸೆಪ್ಟೆಂಬರ್ 2021 ರಂದು ನಡೆದ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆಯನ್ನು ಕೂಗಿದ್ದು ನಿಜ. ಭಾರತದ ಏಕತೆಯನ್ನು ತಿಳಿಸಲು ರಾಕೇಶ್ ಟಿಕಾಯತ್ ‘ಅಲ್ಲಾಹು ಅಕ್ಬರ್’ಎಂದು ಘೋಷಣೆ ಕೂಗಿ, ರೈತರನ್ನು ‘ಹರ ಹರ ಮಹಾದೇವ್’ ಎಂದು ಕೂಗಲು ಪ್ರೇರೆಪಿಸಿದ್ದಾರೆ. ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿಲ್ಲ. ಅವರು ಮನಃಪೂರ್ವಕವಾಗಿ ಒಪ್ಪಿ ಕೂಗಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಹಕ್ಕು ತಪ್ಪಾಗಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...