Homeಫ್ಯಾಕ್ಟ್‌ಚೆಕ್ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

- Advertisement -
- Advertisement -

ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವವರಲ್ಲಿ ಒಬ್ಬರಾದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಮುಸ್ಲಿಮರ ಸಹಾನುಭೂತಿ ಪಡೆಯಲು “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಿದ್ದಾರೆ ಎಂದಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ರಾಕೇಶ್ ಟಿಕಾಯತ್‌ ಕೃಷಿ ಕಾನೂನುಗಳ ವಿರುದ್ಧದ ಸಾರ್ವಜನಿಕ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾರೆ. ಅದೇ ಸಾರ್ವಜನಿಕ ಸಭೆಯಲ್ಲಿ ಹಿಂದೂ ರೈತರು ಕೋಪದಿಂದ ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದ್ದಾರೆ ಎಂದು ವಿಡಿಯೊ ಹಂಚಿಕೊಳ್ಳಲಾಗುತ್ತಿದ್ದು, ಇದು ನಿಜವೇ ಎಂಬುದನ್ನು ಈ ಸುದ್ದಿಯಲ್ಲಿ ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ‘ಪಂಜಾಬ್ ತಕ್’ ಸುದ್ದಿ ಚಾನೆಲ್ ಲೋಗೋ ಇದೆ. ಈ ವಿಡಿಯೊಕ್ಕಾಗಿ ‘ಪಂಜಾಬ್ ತಕ್’ ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಹುಡುಕಿದಾಗ, ‘ಪಂಜಾಬ್ ತಕ್’ ನ್ಯೂಸ್ ಚಾನೆಲ್ 05 ಸೆಪ್ಟೆಂಬರ್ 2021 ರಂದು ಇದನ್ನು ಪ್ರಕಟಿಸಿದೆ. ಈ ವಿಡಿಯೋ 05 ಸೆಪ್ಟೆಂಬರ್ 2021 ರಂದು ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಕಾರ್ಯಕ್ರಮದ ನೇರ ದೃಶ್ಯಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: ‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಂಜಾಬ್ ತಕ್’ ಸುದ್ದಿ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ 11:06 ನಿಮಿಷದಲ್ಲಿ, ರಾಕೇಶ್ ಟಿಕಾಯತ್ ಮಾತನಾಡಿರುವುದು ಇದು. “ಇಂತಹ (ಬಿಜೆಪಿ) ಸರ್ಕಾರಗಳು ದೇಶದಲ್ಲಿ ಮುಂದುವರಿದರೆ, ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತಾರೆ. ಹಿಂದೆ, ಟಿಕಾಯತ್ (ರಾಕೇಶ್ ಟಿಕಾಯತ್ ತಂದೆ ಮತ್ತು ಬಿಕೆಯು ಮಾಜಿ ಅಧ್ಯಕ್ಷ ಮಹೇಂದ್ರ ಸಿಂಗ್ ಟಿಕಾಯತ್) ಸಮಯದಲ್ಲಿ ಘೋಷಣೆಗಳನ್ನು ಕೂಗಲಾಗುತ್ತಿತ್ತು. ‘ಅಲ್ಲಾಹು ಅಕ್ಬರ್’ (ತಕ್ಷಣ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗುತ್ತದೆ), ‘ಅಲ್ಲಾಹು ಅಕ್ಬರ್ (ಮತ್ತೆ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗಿತ್ತದೆ). ಈ ‘ಅಲ್ಲಾಹು ಅಕ್ಬರ್-ಹರ ಹರ ಮಹಾದೇವ್’ ಘೋಷಣೆಗಳು ದೇಶದಲ್ಲಿ ಇದುವರೆಗೆ ನಡೆದ ಚಳುವಳಿಗಳಲ್ಲಿ ಘೋಷಿಸಲಾಗಿದೆ. ಭವಿಷ್ಯದಲ್ಲಿ ನಡೆಯುವ ಚಳುವಳಿಗಳಲ್ಲಿಯೂ ಈ ಘೋಷಣೆಗಳನ್ನು ಕೂಗಲಾಗುತ್ತದೆ. ನಮ್ಮ ಬಳಿ ಗಲಭೆಗಳು ಉದ್ಭವಿಸುವುದಿಲ್ಲ. ಅವರು ಜನರನ್ನು ಬೇರ್ಪಡಿಸಲು ಪ್ರಯತ್ನಿಸಿದರೆ, ನಾವು ಒಂದಾಗಲು ಪ್ರಯತ್ನಿಸುತ್ತೇವೆ. ಸುಳ್ಳು ಪ್ರಚಾರದಿಂದ ಜನರು ಮೋಸ ಹೋಗಬಾರದು” ಎಂದು ಹೇಳಿದ್ದಾರೆ.

ಇತರ ಕೆಲವು ಸುದ್ದಿ ವಾಹಿನಿಗಳು ರಾಕೇಶ್ ಟಿಕಾಯತ್ ಕಿಸಾನ್ ಮಹಾ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೀಡಿಯೋವನ್ನು ಪ್ರಕಟಿಸಿವೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಭಾಷಣ ಮಾಡಿದ ರಾಕೇಶ್ ಟಿಕಾಯತ್ ವಿಡಿಯೊವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ರಾಕೇಶ್ ಟಿಕಾಯತ್ ಅವರ ಅಲ್ಲಾ ಹೋ ಅಕ್ಬರ್ ‘ಘೋಷಣೆಯ ಕುರಿತು ಸಂಪೂರ್ಣ ಸ್ಪಷ್ಟತೆಯೊಂದಿಗೆ 07 ಸೆಪ್ಟೆಂಬರ್ 2021 ರಂದು ‘ಬಿಬಿಸಿ ನ್ಯೂಸ್ ಹಿಂದಿ’ಯಲ್ಲಿ’ ವಿಡಿಯೊವನ್ನು ಪ್ರಕಟಿಸಿದ್ದಾರೆ. ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಹಳುವಂತೆ, ರಾಕೇಶ್ ಟಿಕಾಯತ್ ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಿಲ್ಲ ಎಂದು ಹೇಳಬಹುದಾಗಿದೆ.

ಪ್ರತಿಪಾದನೆ: ರೈತ ಚಳುವಳಿಯ ನಾಯಕ ರಾಕೇಶ್ ಟಿಕಾಯತ್, ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದರೆ, ಹಿಂದೂ ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿದ್ದಾರೆ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಲಾಗಿರುವ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ರಾಕೇಶ್ ಟಿಕಾಯತ್ ಮುಜಾಫರ್ ನಗರದಲ್ಲಿ 05 ಸೆಪ್ಟೆಂಬರ್ 2021 ರಂದು ನಡೆದ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆಯನ್ನು ಕೂಗಿದ್ದು ನಿಜ. ಭಾರತದ ಏಕತೆಯನ್ನು ತಿಳಿಸಲು ರಾಕೇಶ್ ಟಿಕಾಯತ್ ‘ಅಲ್ಲಾಹು ಅಕ್ಬರ್’ಎಂದು ಘೋಷಣೆ ಕೂಗಿ, ರೈತರನ್ನು ‘ಹರ ಹರ ಮಹಾದೇವ್’ ಎಂದು ಕೂಗಲು ಪ್ರೇರೆಪಿಸಿದ್ದಾರೆ. ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿಲ್ಲ. ಅವರು ಮನಃಪೂರ್ವಕವಾಗಿ ಒಪ್ಪಿ ಕೂಗಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಹಕ್ಕು ತಪ್ಪಾಗಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...