Homeಫ್ಯಾಕ್ಟ್‌ಚೆಕ್ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

- Advertisement -
- Advertisement -

ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವವರಲ್ಲಿ ಒಬ್ಬರಾದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಮುಸ್ಲಿಮರ ಸಹಾನುಭೂತಿ ಪಡೆಯಲು “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಿದ್ದಾರೆ ಎಂದಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ರಾಕೇಶ್ ಟಿಕಾಯತ್‌ ಕೃಷಿ ಕಾನೂನುಗಳ ವಿರುದ್ಧದ ಸಾರ್ವಜನಿಕ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾರೆ. ಅದೇ ಸಾರ್ವಜನಿಕ ಸಭೆಯಲ್ಲಿ ಹಿಂದೂ ರೈತರು ಕೋಪದಿಂದ ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದ್ದಾರೆ ಎಂದು ವಿಡಿಯೊ ಹಂಚಿಕೊಳ್ಳಲಾಗುತ್ತಿದ್ದು, ಇದು ನಿಜವೇ ಎಂಬುದನ್ನು ಈ ಸುದ್ದಿಯಲ್ಲಿ ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ‘ಪಂಜಾಬ್ ತಕ್’ ಸುದ್ದಿ ಚಾನೆಲ್ ಲೋಗೋ ಇದೆ. ಈ ವಿಡಿಯೊಕ್ಕಾಗಿ ‘ಪಂಜಾಬ್ ತಕ್’ ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಹುಡುಕಿದಾಗ, ‘ಪಂಜಾಬ್ ತಕ್’ ನ್ಯೂಸ್ ಚಾನೆಲ್ 05 ಸೆಪ್ಟೆಂಬರ್ 2021 ರಂದು ಇದನ್ನು ಪ್ರಕಟಿಸಿದೆ. ಈ ವಿಡಿಯೋ 05 ಸೆಪ್ಟೆಂಬರ್ 2021 ರಂದು ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಕಾರ್ಯಕ್ರಮದ ನೇರ ದೃಶ್ಯಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: ‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಂಜಾಬ್ ತಕ್’ ಸುದ್ದಿ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ 11:06 ನಿಮಿಷದಲ್ಲಿ, ರಾಕೇಶ್ ಟಿಕಾಯತ್ ಮಾತನಾಡಿರುವುದು ಇದು. “ಇಂತಹ (ಬಿಜೆಪಿ) ಸರ್ಕಾರಗಳು ದೇಶದಲ್ಲಿ ಮುಂದುವರಿದರೆ, ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತಾರೆ. ಹಿಂದೆ, ಟಿಕಾಯತ್ (ರಾಕೇಶ್ ಟಿಕಾಯತ್ ತಂದೆ ಮತ್ತು ಬಿಕೆಯು ಮಾಜಿ ಅಧ್ಯಕ್ಷ ಮಹೇಂದ್ರ ಸಿಂಗ್ ಟಿಕಾಯತ್) ಸಮಯದಲ್ಲಿ ಘೋಷಣೆಗಳನ್ನು ಕೂಗಲಾಗುತ್ತಿತ್ತು. ‘ಅಲ್ಲಾಹು ಅಕ್ಬರ್’ (ತಕ್ಷಣ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗುತ್ತದೆ), ‘ಅಲ್ಲಾಹು ಅಕ್ಬರ್ (ಮತ್ತೆ ಜನರ ಗುಂಪು ‘ಹರ ಹರ ಮಹಾದೇವ’ ಎಂದು ಕೂಗಿತ್ತದೆ). ಈ ‘ಅಲ್ಲಾಹು ಅಕ್ಬರ್-ಹರ ಹರ ಮಹಾದೇವ್’ ಘೋಷಣೆಗಳು ದೇಶದಲ್ಲಿ ಇದುವರೆಗೆ ನಡೆದ ಚಳುವಳಿಗಳಲ್ಲಿ ಘೋಷಿಸಲಾಗಿದೆ. ಭವಿಷ್ಯದಲ್ಲಿ ನಡೆಯುವ ಚಳುವಳಿಗಳಲ್ಲಿಯೂ ಈ ಘೋಷಣೆಗಳನ್ನು ಕೂಗಲಾಗುತ್ತದೆ. ನಮ್ಮ ಬಳಿ ಗಲಭೆಗಳು ಉದ್ಭವಿಸುವುದಿಲ್ಲ. ಅವರು ಜನರನ್ನು ಬೇರ್ಪಡಿಸಲು ಪ್ರಯತ್ನಿಸಿದರೆ, ನಾವು ಒಂದಾಗಲು ಪ್ರಯತ್ನಿಸುತ್ತೇವೆ. ಸುಳ್ಳು ಪ್ರಚಾರದಿಂದ ಜನರು ಮೋಸ ಹೋಗಬಾರದು” ಎಂದು ಹೇಳಿದ್ದಾರೆ.

ಇತರ ಕೆಲವು ಸುದ್ದಿ ವಾಹಿನಿಗಳು ರಾಕೇಶ್ ಟಿಕಾಯತ್ ಕಿಸಾನ್ ಮಹಾ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೀಡಿಯೋವನ್ನು ಪ್ರಕಟಿಸಿವೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಭಾಷಣ ಮಾಡಿದ ರಾಕೇಶ್ ಟಿಕಾಯತ್ ವಿಡಿಯೊವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ರಾಕೇಶ್ ಟಿಕಾಯತ್ ಅವರ ಅಲ್ಲಾ ಹೋ ಅಕ್ಬರ್ ‘ಘೋಷಣೆಯ ಕುರಿತು ಸಂಪೂರ್ಣ ಸ್ಪಷ್ಟತೆಯೊಂದಿಗೆ 07 ಸೆಪ್ಟೆಂಬರ್ 2021 ರಂದು ‘ಬಿಬಿಸಿ ನ್ಯೂಸ್ ಹಿಂದಿ’ಯಲ್ಲಿ’ ವಿಡಿಯೊವನ್ನು ಪ್ರಕಟಿಸಿದ್ದಾರೆ. ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಹಳುವಂತೆ, ರಾಕೇಶ್ ಟಿಕಾಯತ್ ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಿಲ್ಲ ಎಂದು ಹೇಳಬಹುದಾಗಿದೆ.

ಪ್ರತಿಪಾದನೆ: ರೈತ ಚಳುವಳಿಯ ನಾಯಕ ರಾಕೇಶ್ ಟಿಕಾಯತ್, ಮುಸ್ಲಿಮರ ಸಹಾನುಭೂತಿಗಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದರೆ, ಹಿಂದೂ ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿದ್ದಾರೆ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಲಾಗಿರುವ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ರಾಕೇಶ್ ಟಿಕಾಯತ್ ಮುಜಾಫರ್ ನಗರದಲ್ಲಿ 05 ಸೆಪ್ಟೆಂಬರ್ 2021 ರಂದು ನಡೆದ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆಯನ್ನು ಕೂಗಿದ್ದು ನಿಜ. ಭಾರತದ ಏಕತೆಯನ್ನು ತಿಳಿಸಲು ರಾಕೇಶ್ ಟಿಕಾಯತ್ ‘ಅಲ್ಲಾಹು ಅಕ್ಬರ್’ಎಂದು ಘೋಷಣೆ ಕೂಗಿ, ರೈತರನ್ನು ‘ಹರ ಹರ ಮಹಾದೇವ್’ ಎಂದು ಕೂಗಲು ಪ್ರೇರೆಪಿಸಿದ್ದಾರೆ. ರೈತರು ಕೋಪದಿಂದ ‘ಹರಹರ ಮಹಾದೇವ್’ ಎಂದು ಘೋಷಣೆ ಕೂಗಿಲ್ಲ. ಅವರು ಮನಃಪೂರ್ವಕವಾಗಿ ಒಪ್ಪಿ ಕೂಗಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಹಕ್ಕು ತಪ್ಪಾಗಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...