Homeಮುಖಪುಟಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೇಜ್ರಿವಾಲ್‌ -ಸೋನು ಸೂದ್‌ ಭೇಟಿ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

- Advertisement -
- Advertisement -

ಕೊರೊನಾ ಕಾಲದ ಬಡವರ ಆಪದ್ಬಾಂಧವ ಅನಿಸಿಕೊಂಡಿದ್ದ ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, 20 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸತತ ಮೂರು ದಿನಗಳ ಕಾಲ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಸೋನು ಸೂದ್ ಅವರ ಲಾಭರಹಿತ ಎನ್‌ಜಿಒ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಎಂದು ತೆರಿಗೆ ಇಲಾಖೆ ತಿಳಿಸಿದೆ.

“ಆದಾಯ ತೆರಿಗೆ ಇಲಾಖೆಯ ಶೋಧದ ಸಮಯದಲ್ಲಿ, ನಟ ಮತ್ತು ಆತನ ಸಹಚರರು ತೆರಿಗೆ ವಂಚನೆ ನಡೆಸಿರುವ ಬಗ್ಗೆ ಸಾಕ್ಷ್ಯಗಳು ದೊರೆತಿವೆ. ನಟ ಓನು ಸೂದ್ ತಮ್ಮ ಲೆಕ್ಕವಿಲ್ಲದ ಆದಾಯವನ್ನು ನಕಲಿ ವಿಧಾನದಲ್ಲಿ ಸಾಲದ ರೂಪದಲ್ಲಿ ಪಡೆದಿದ್ದಾರೆ” ಎಂದು ಇಲಾಖೆ ಹೇಳಿಕೆಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೊರೊನಾ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಸೂದ್ ಚಾರಿಟಿ ಫೌಂಡೇಶನ್, ಈ ವರ್ಷದ ಏಪ್ರಿಲ್ ಒಳಗೆ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಲಾಗಿದೆ. ಉಳಿದ 17 ಕೋಟಿ ರೂಪಾಯಿಗಳನ್ನು ಸೂದ್ ಚಾರಿಟಿ ಫೌಂಡೇಶನ್ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಹಾಗೆ ಉಳಿದಿದೆ ಎನ್ನಲಾಗಿದೆ.


ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...