Homeಕರ್ನಾಟಕರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

ರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

- Advertisement -
- Advertisement -

ಉತ್ತರಪ್ರದೇಶದಲ್ಲಿ ಕಳೆದ ತಿಂಗಳಿನಿಂದ ಮಕ್ಕಳನ್ನು ಕಾಡುತ್ತಿರುವ ವೈರಲ್ ಜ್ವರ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ನೂರಾರು ಮಕ್ಕಳು ಈ ವೈರಾಣು ಸೋಂಕು ಮತ್ತು ಡೆಂಗ್ಯೂನಿಂದ ಬಳಲುತ್ತಿವೆ ಎಂದು ವರದಿಯಾಗಿದೆ.

ಯಾದಗಿರಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ಬೆಂಗಳೂರು, ಗದಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರಿನ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಯಾದಗಿರಿ ಮತ್ತು ಗದಗದಲ್ಲಿ ಹೆಚ್ಚಿನ ಮಕ್ಕಳು ಈ ಸೋಂಕಿಗೆ ತುತ್ತಾಗಿದ್ದಾರೆ.

ಇದು ಮಳೆಗಾಲವಾದ್ದರಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಕಣಿಸಿಕೊಳ್ಳುತ್ತದೆ. ಸಣ್ಣ ಜ್ವರ ಕೂಡ ಹೆಚ್ಚು ದಿನ ಇರುತ್ತದೆ. ಜ್ವರ ಉಲ್ಬಣಿಸಿದರೆ ಗುಣವಾಗುವಾಗುವುದು ತಡವಾಗುತ್ತದೆ. ವೈರಲ್‌ ನ್ಯುಮೊನಿಯಾಗೆ ತಿರುಗುತ್ತದೆ. ಆಗ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ‘ಒಂದು ಮಗುವಿನಲ್ಲಿ ವೈರಾಣು ಸೋಂಕು ಕಾಣಿಸಿಕೊಂಡರೆ ಆ ಮಗುವಿನೊಂದಿಗೆ ಇನ್ನೊಂದು ಮಗು ಬೆರೆಯಲು ಬಿಡಬಾರದು. ವೈರಾಣು ಜ್ವರಕ್ಕೆ ನಿರ್ದಿಷ್ಟ ಔಷಧ ಇರುವುದಿಲ್ಲ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ- ಹಸಿವಿನಿಂದ ಹಸುಗೂಸು ಸಾವು, ಬದುಕುಳಿದ 3 ವರ್ಷದ ಮಗು

ವೈರಲ್ ಸೋಂಕಿನ ಲಕ್ಷಣ ಇರುವ ಬಹಳಷ್ಟು ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಹಾಗಾಗಿ, ಕೋವಿಡ್‌ ಸೋಂಕಿನ ಭಯ ಬೇಡ ಎಂದಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನ 30 ಹಾಸಿಗೆಗಳಲ್ಲಿ 26 ಹಾಸಿಗೆಗಳು ಭರ್ತಿಯಾಗಿವೆ. ಆರು ಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಯಾದಗಿರಿಯಲ್ಲಿ  ಒಂದೇ ದಿನ 750 ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಕಾಣಿಸಿಕೊಂಡಿದೆ.

ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ವೈರಲ್ ಜ್ವರದಿಂದ ಹಾಸಿಗೆ ಸಿಗದೆ ಮಕ್ಳಳು, ಪೋಷಕರು ಪರದಾಡಿದ ಘಟನೆಗಳು ನಡೆದಿವೆ. ಗದಗ ಜಿಲ್ಲೆಯಲ್ಲಿ 327 ಕ್ಕೂ ಹೆಚ್ಚು ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಆರೋಗ್ಯ ಸಮಸ್ಯೆ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ 200 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಯಾ ಜಿಲ್ಲೆಗಳ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ತೀವ್ರ ನಿಗಾ ವಹಿಸಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಕುದಿಸಿ ಆರಿಸಿದ ನೀರು ನೀಡುವುದು, ಪೌಷ್ಠಿಕ ಆಹಾರ, ಸ್ವಚ್ಛತೆ, ರಸ್ತೆ ಬದಿಯ ತಿಂಡಿಗಳಿಮದ ಮಕ್ಕಳನ್ನೂ ದೂರವಿರಿಸುವುದು, ಮಕ್ಕಳನ್ನು ಮನೆಯಲ್ಲಿ ನೆನೆಯಲು ಬಿಡದೆ ಇರುವುದಂತಹ ಕ್ರಮಗಳನ್ನು ರೂಢಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ.

ಇನ್ನು, ಮಕ್ಕಳು ಬೆಡ್, ಚಿಕಿತ್ಸೆ ದೊರೆಯದೆ ಪರದಾಡುತ್ತಿರುವುದಕ್ಕೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಕಾಡುತ್ತಿದೆ, ಪುಟ್ಟ ಮಕ್ಕಳ ಚಿಕಿತ್ಸೆಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ” ಎಂದು ಟ್ವೀಟ್ ಮಾಡಿದೆ.

“ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್ ಜ್ವರಕ್ಕೆ ಬೆಡ್ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕರೋನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ” ಎಂದು ಬಿಜೆಪಿ ಆಡಳಿತದ ವಿರುದ್ಧ ಕಿಡಿ ಕಾರಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...