Homeಕರ್ನಾಟಕರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

ರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

- Advertisement -
- Advertisement -

ಉತ್ತರಪ್ರದೇಶದಲ್ಲಿ ಕಳೆದ ತಿಂಗಳಿನಿಂದ ಮಕ್ಕಳನ್ನು ಕಾಡುತ್ತಿರುವ ವೈರಲ್ ಜ್ವರ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ನೂರಾರು ಮಕ್ಕಳು ಈ ವೈರಾಣು ಸೋಂಕು ಮತ್ತು ಡೆಂಗ್ಯೂನಿಂದ ಬಳಲುತ್ತಿವೆ ಎಂದು ವರದಿಯಾಗಿದೆ.

ಯಾದಗಿರಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ಬೆಂಗಳೂರು, ಗದಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರಿನ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಯಾದಗಿರಿ ಮತ್ತು ಗದಗದಲ್ಲಿ ಹೆಚ್ಚಿನ ಮಕ್ಕಳು ಈ ಸೋಂಕಿಗೆ ತುತ್ತಾಗಿದ್ದಾರೆ.

ಇದು ಮಳೆಗಾಲವಾದ್ದರಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಕಣಿಸಿಕೊಳ್ಳುತ್ತದೆ. ಸಣ್ಣ ಜ್ವರ ಕೂಡ ಹೆಚ್ಚು ದಿನ ಇರುತ್ತದೆ. ಜ್ವರ ಉಲ್ಬಣಿಸಿದರೆ ಗುಣವಾಗುವಾಗುವುದು ತಡವಾಗುತ್ತದೆ. ವೈರಲ್‌ ನ್ಯುಮೊನಿಯಾಗೆ ತಿರುಗುತ್ತದೆ. ಆಗ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ‘ಒಂದು ಮಗುವಿನಲ್ಲಿ ವೈರಾಣು ಸೋಂಕು ಕಾಣಿಸಿಕೊಂಡರೆ ಆ ಮಗುವಿನೊಂದಿಗೆ ಇನ್ನೊಂದು ಮಗು ಬೆರೆಯಲು ಬಿಡಬಾರದು. ವೈರಾಣು ಜ್ವರಕ್ಕೆ ನಿರ್ದಿಷ್ಟ ಔಷಧ ಇರುವುದಿಲ್ಲ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ- ಹಸಿವಿನಿಂದ ಹಸುಗೂಸು ಸಾವು, ಬದುಕುಳಿದ 3 ವರ್ಷದ ಮಗು

ವೈರಲ್ ಸೋಂಕಿನ ಲಕ್ಷಣ ಇರುವ ಬಹಳಷ್ಟು ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಹಾಗಾಗಿ, ಕೋವಿಡ್‌ ಸೋಂಕಿನ ಭಯ ಬೇಡ ಎಂದಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನ 30 ಹಾಸಿಗೆಗಳಲ್ಲಿ 26 ಹಾಸಿಗೆಗಳು ಭರ್ತಿಯಾಗಿವೆ. ಆರು ಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಯಾದಗಿರಿಯಲ್ಲಿ  ಒಂದೇ ದಿನ 750 ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಕಾಣಿಸಿಕೊಂಡಿದೆ.

ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ವೈರಲ್ ಜ್ವರದಿಂದ ಹಾಸಿಗೆ ಸಿಗದೆ ಮಕ್ಳಳು, ಪೋಷಕರು ಪರದಾಡಿದ ಘಟನೆಗಳು ನಡೆದಿವೆ. ಗದಗ ಜಿಲ್ಲೆಯಲ್ಲಿ 327 ಕ್ಕೂ ಹೆಚ್ಚು ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಆರೋಗ್ಯ ಸಮಸ್ಯೆ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ 200 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಯಾ ಜಿಲ್ಲೆಗಳ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ತೀವ್ರ ನಿಗಾ ವಹಿಸಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಕುದಿಸಿ ಆರಿಸಿದ ನೀರು ನೀಡುವುದು, ಪೌಷ್ಠಿಕ ಆಹಾರ, ಸ್ವಚ್ಛತೆ, ರಸ್ತೆ ಬದಿಯ ತಿಂಡಿಗಳಿಮದ ಮಕ್ಕಳನ್ನೂ ದೂರವಿರಿಸುವುದು, ಮಕ್ಕಳನ್ನು ಮನೆಯಲ್ಲಿ ನೆನೆಯಲು ಬಿಡದೆ ಇರುವುದಂತಹ ಕ್ರಮಗಳನ್ನು ರೂಢಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ.

ಇನ್ನು, ಮಕ್ಕಳು ಬೆಡ್, ಚಿಕಿತ್ಸೆ ದೊರೆಯದೆ ಪರದಾಡುತ್ತಿರುವುದಕ್ಕೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಕಾಡುತ್ತಿದೆ, ಪುಟ್ಟ ಮಕ್ಕಳ ಚಿಕಿತ್ಸೆಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ” ಎಂದು ಟ್ವೀಟ್ ಮಾಡಿದೆ.

“ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್ ಜ್ವರಕ್ಕೆ ಬೆಡ್ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕರೋನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ” ಎಂದು ಬಿಜೆಪಿ ಆಡಳಿತದ ವಿರುದ್ಧ ಕಿಡಿ ಕಾರಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...