Homeಸಿನಿಮಾಕ್ರೀಡೆಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

ಟೆಸ್ಟ್ ಸರಣಿಯಲ್ಲಿ ಮುನ್ನಡೆ: ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಪರಾಕ್ರಮ

- Advertisement -
- Advertisement -

ದಶಕಗಳ ಬಳಿಕ ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಸರಣಿ ಗೆಲುವಿನ ವಾಸನೆ ಮೂಗಿನ ಹತ್ತಿರಕ್ಕೆ ಬಂದರೂ, ಅದರ ಸಿಹಿ ಮಾತ್ರ ಬಾಯಿಗೆ ತಾಗಲಿಲ್ಲ. ಕಾರಣ ಭಾರತ ತಂಡದ ಸದಸ್ಯರೊಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಎರಡು ಗಂಟೆಯ ಮುನ್ನ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು. ಪರಿಣಾಮ ಕೊನೆಯ ಐದನೇ ಟೆಸ್ಟ್ ಪಂದ್ಯ ಮುಂದೂಡಲ್ಪಟ್ಟಿತು.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಲು ತಂಡದ ಸಾಂಘಿಕ ಆಟದ ಬಲ ಎದ್ದು ಕಾಣುತ್ತಿತ್ತು. ಯುವ ಆಟಗಾರರು ಸಿಕ್ಕ ಅವಕಾಶಗಳನ್ನು ಎರಡೂ ಕೈಗಳಿಂದ ಬಳಿಸಿಕೊಂಡ ತಮ್ಮ ಮೇಲೆ ಬಿಳಿ ಜೆರ್ಸಿ ಕಾಯಂ ಇರುವಂತೆ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ ಅನುಭವಿ ಆಟಗಾರರ ಆಟ ಆರಂಭದಲ್ಲಿ ಮಂಕಾಗಿದ್ದರೂ, ನಂತರ ಹದಕ್ಕೆ ಬಂದಿತು. ವಿರಾಟ್ ಕೊಹ್ಲಿ ಶತಕ ಬಾರಸದೇ ಇದ್ದರೂ, ರನ್ ಕಲೆ ಹಾಕಿ ಮಿಂಚಿದ್ದರು.

ಮಧ್ಯಮ ಕ್ರಮಾಂಕದ ಆಟಗಾರರು ಸಿಕ್ಕ ಅವಕಾಶವನ್ನು ಚೆನ್ನಾಗಿ ಸದುಪಯೋಗ ಪಡಿಸಿಕೊಳ್ಳಲಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಆದರೆ ವಾಸ್ತವಾಗಿ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಚೇತೇಶ್ವರ್ ಪೂಜರ ಹಾಗೂ ಅಂಜಿಕ್ಯ ರಹಾನೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ ಪಂದ್ಯಗೆಲ್ಲಿಸುವಲ್ಲಿ ಇವರ ಪ್ರದರ್ಶನ ಸಾಕಾಯಿತು. ತಂಡಕ್ಕೆ ಅಗತ್ಯ ಇದ್ದಾಗ ಈ ಅನುಭವಿ ಬ್ಯಾಟ್ಸ್ ಮನ್ ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡಿ ರನ್ ಮಹಲ್ ಕಟ್ಟಿದ್ದೂ ಇದೆ. ಲಾರ್ಡ್ಸ್ ಅಂಗಳದಲ್ಲಿ ಪೂಜಾರ, ರಹಾನೆ ಆಡಿದ ರೀತಿಗೆ ವಿಶ್ವವೇ ಸಲಾಂ ಎಂದಿದೆ. ಒತ್ತಡವನ್ನು ಮೆಟ್ಟಿ ನಿಂತು ರನ್ ಮಹಲ್ ಕಟ್ಟಿದ ಪರಿ ಯುವ ಆಟಗಾರರಿಗೆ ಮಾದರಿ.

ಇನ್ನು ಆರಂಭಿಕ ಸ್ಥಾನವನ್ನು ಗಟ್ಟಿ ಪಡಿಸಿಕೊಳ್ಳುವಲ್ಲಿ ರೋಹಿತ್ ಶರ್ಮಾ ಸಫಲರಾಗಿದ್ದಾರೆ ಎಂದರೆ ತಪ್ಪಾಗಲಾರದರು. ಇವರು ಮೊದಲ ಪಂದ್ಯದಿಂದಲೂ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಂಗಳದಲ್ಲಿ ಅವರ ನೆಚ್ಚಿನ ನಟರಾಜ ಶಾಟ್, ಆನ್ ಡ್ರೈವ್, ಆಫ್ ಡ್ರೈವ್ ಮನಮೋಹಕವಾಗಿದ್ದವು. ಇವರು ಸಮಯೋಚಿತ ಪ್ರದರ್ಶನ ನೀಡಿದ ಬಲದಿಂದ ಟೀಮ್ ಇಂಡಿಯಾ ಪಂದ್ಯಗಳಲ್ಲಿ ಬೃಹತ್ ಮೊತ್ತ ದಾಖಲಿಸುವಲ್ಲಿ ನೆರವಾಯಿತು. ಅದರಲ್ಲೂ ನಾಲ್ಕನೇ ಟೆಸ್ಟ್ ನಲ್ಲಿ ಒತ್ತಡವನ್ನು ಮೆಟ್ಟಿನಿಂತು ರೋಹಿತ್ ಆಡಿದ ಧಾಟಿ ನಿಜಕ್ಕೂ ಇವರಲ್ಲಿನ ಕಲಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಿಟ್ ಮ್ಯಾನ್ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಂಡರು.

ನಿಜಕ್ಕೂ ರಿಷಭ್ ಪಂತ್ ಅವರು ತಮ್ಮ ನೈಜ ಆಟವನ್ನು ಆಡುವಲ್ಲಿ ವಿಫಲರಾದಂತೆ ಕಂಡರೂ, ಅವರ ಆಟದ ಶೈಲಿ ಬದಲಿಸಿಕೊಂಡಿದ್ದು ಎದ್ದು ಕಾಣುತ್ತಿತ್ತು. ರಕ್ಷಣಾತ್ಮಕ ಆಟಕ್ಕೆ ಮಣೆ ಹಾಕಿ ದೊಡ್ಡ ಇನ್ನಿಂಗ್ಸ್ ಕಟ್ಟುವ ಕಲೆಯನ್ನು ಪಂತ್ ಕರಗತ ಮಾಡಿಕೊಳ್ಳುತ್ತಿದ್ದಾರೆ ಎಂದು ಗೋಚರಿಸುತ್ತಿತ್ತು. ಅಲ್ಲದೆ ಇವರು ವಿಕೆಟ್ ಹಿಂದೆ ಮನಮೋಹಕವಾಗಿ ಪ್ರದರ್ಶನ ನೀಡಿದರು. ಸರಣಿಯಲ್ಲಿ ಪಂತ್ ಹಲವು ಬಾರಿ ಅದ್ಭುತ ಎನ್ನುವಂತಹ ಕ್ಯಾಚ್ ಗಳನ್ನು ಪಡೆದು ಟೀಕಾಕರ ಬಾಯಿ ಮುಚ್ಚಿಸಿದ್ದಾರೆ.

Photo Courtesy: Times of India

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಬಾಯಲ್ಲಿ ಸದಾ ಇರುವಂತೆ ಮಾಡಿದ ಇನ್ನೊಂದು ಹೆಸರು ಯುವ ವೇಗಿ ಶಾರ್ದೂಲ್ ಠಾಕೂರ್. ತಮ್ಮ ಬಿಗುವಿನ ದಾಳಿ ಹಾಗೂ ಬಿರುಸಿನ ಬ್ಯಾಟಿಂಗ್ ನಿಂದಲೇ ಇವರು ತಂಡಕ್ಕೆ ನೆರವಾದ ಆಟಗಾರ. ಇನ್ನೊಂದು ವಿಶೇಷ ಎಂದರೆ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಗೆ ಅತಿ ಹೆಚ್ಚು ಕಾಡಿದ ಬೌಲರ್ ಗಳಲ್ಲಿ ಠಾಕೂರ್ ಗೆ ಅಗ್ರ ಸ್ಥಾನ. ಇವರ ಸ್ವಿಂಗ್ ಹಾಗೂ ಲೆಂತ್ ದಾಳಿಯನ್ನು ಗುರುತಿಸುವಲ್ಲಿ ರೂಟ್ ಎಡವಿದ್ದಾರೆ. ಇನ್ನು ತಂಡ ಸಂಕಷ್ಟದಲ್ಲಿದ್ದಾಗ ಟೆಸ್ಟ್ ಪಂದ್ಯಕ್ಕೆ ಚುಟುಕು ಪಂದ್ಯದ ಝಲಕ ನೀಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸೂಪರ್ ಪ್ರದರ್ಶನ ನೀಡಿ ಠಾಕೂರ್ ಅಬ್ಬರಿಸಿದರು. ಇನ್ನು ಉಮೇಶ್ ಯಾದವ್ ಸಹ ಸಿಕ್ಕ ಅವಕಾಶದಲ್ಲಿ ತಮ್ಮ ಬೌಲಿಂಗ್ ನೈಪುಣ್ಯತೆಯ ಪ್ರದರ್ಶನ ಮಾಡಿದರು.

ದಿನ ಕಳೆದಂತೆ ಟೀಮ್ ಇಂಡಿಯಾದ ಕಾಯ್ದಿರಿಸಿದ ಆಟಗಾರರ ಪಟ್ಟಿ ಬೆಳೆಯುತ್ತಾ ಹೋದರೂ, ಗುಣಮಟ್ಟದ ಆಟಗಾರರು ತಯಾರಾಗುತ್ತಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಕ್ಷಮತೆಯನ್ನು ಸಾಬೀತು ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ರಸ್ತುತ ಅಂತ್ಯತ ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿರುವ ಕೀರ್ತಿ ಟೀಮ್ ಇಂಡಿಯಾದ್ದಾಗಿದೆ. ಬೌನ್ಸಿ ಟ್ರ್ಯಾಕ್ ಗಳಲ್ಲಿ ಕಮಾಲ್ ಪ್ರದರ್ಶನ ನೀಡಿದ ಯುವಕರು ಇದೀಗ ಟಿ-20 ಹಬ್ಬಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವದ ಶ್ರೀಮಂತ ಲೀಗ್ ಯುಎಇನಲ್ಲಿ ಅನಾವರಣ ಗೊಳ್ಳಲಿದೆ. ಈ ಲೀಗ್ ನಲ್ಲಿ ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡದ ಪರ ಭರ್ಜರಿ ಪ್ರದರ್ಶನ ನೀಡಲು ಆಂಗ್ಲರ ನಾಡು ವೇದಿಕೆ ಆಗಿದೆ ಎಂದರೆ ತಪ್ಪಾಗಲಾರದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...