Homeಮುಖಪುಟಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ): ಇವೆಷ್ಟು ನಿಖರ? ಎಷ್ಟು ಸಲ ಫೇಲಾದವು?

‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!

- Advertisement -
- Advertisement -

ಇದನ್ನು ನೀವು ಓದುವ ಹೊತ್ತಿಗಾಗಲೇ ಎಕ್ಸಿಟ್ ಪೋಲ್ ಅಂದರೆ ಚುನಾವಣೆ ನಂತರದ ಸಮೀಕ್ಷೆಗಳು ಹೊರಬೀಳಲು ಶುರು ಮಾಡಿರುತ್ತವೆ. ಭಾರತದಲ್ಲಿ ಇವತ್ತು ಹಲವಾರು ಸಂಸ್ಥೆಗಳು ಹಲವು ಚಾನೆಲ್‍ಗಳ ಸಹಭಾಗಿತ್ವದಲ್ಲಿ ಈ ಸಮೀಕ್ಷೆ ಮಾಡುತ್ತಿವೆ. ಇದರಲ್ಲಿ ಯಾರು ಹೆಚ್ಚು ವಿಶ್ವಾಸಾರ್ಹರು? ಅವುಗಳ ಹಿಂದಿನ ಸಾಧನೆಯನ್ನು ನೋಡಿದರೆ, ಒಂದು ನಿಖರ ಉತ್ತರ ಸಿಗಬಹುದು. ಆ ಪ್ರಯತ್ನ ಇಲ್ಲಿದೆ…

ಈ ಮೊದಲ ವಾಕ್ಯ ಓದಿ: ‘ದೇಶದಲ್ಲಿ ಹಿಂದಿನ ಎಕ್ಸಿಟ್ ಪೋಲ್‍ಗಳು ಅಪರೂಪಕ್ಕೊಮ್ಮೆ ನಿಖರವಾಗಿವೆ!
ಇದು ಒಟ್ಟಾಗಿ ಎಲ್ಲ ಎಕ್ಸಿಟ್ ಪೋಲ್‍ಗಳನ್ನು ಸಮೀಕರಿಸಿ ನೀಡಿದ ತೀರ್ಮಾನ. ಆದರೂ ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಈ ಚುನಾವಣೋತ್ತರ ಸಮೀಕ್ಷೆಗಳೇ ( ಎಕ್ಸಿಟ್ ಪೋಲ್ಸ್) ಆದಷ್ಟು ಹತ್ತಿರ ಹತ್ತಿರದ ಸಂಖ್ಯೆಗಳನ್ನು ಕೊಡುತ್ತ ಬಂದಿವೆ.

ಎಕ್ಸಿಟ್ ಪೋಲ್ ನಡೆಸುವ ಬಹುಪಾಲು ಸಂಸ್ಥೆಗಳು ತಮ್ಮದು ನಿಖರ, ವಿಶ್ವಾಸಾರ್ಹ ಎನ್ನುತ್ತವೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಮೀಕ್ಷಾ ಸಂಸ್ಥೆಗಳ ಟ್ರ್ಯಾಕ್ ರೆಕಾರ್ಡ್ ಏನು ಎಂದುದನ್ನು ನೋಡೋಣ…

• ಭಾರತದಲ್ಲಿ ಎಕ್ಸಿಟ್ ಪೋಲ್ ವಿಷಯಕ್ಕೆ ಬಂದರೆ 1996 ಮಹತ್ವದ ವರ್ಷ. ಆಗ ದೂರದರ್ಶನವು ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವೆಲಪಿಂಗ್ ಸೊಸೈಟೀಸ್ ( ಸಿಎಸ್‍ಡಿಎಸ್)ಗೆ ಚುನಾವಣಾ ಸಮೀಕ್ಷೆ ಮಾಡಿಕೊಡಲು ಕೇಳಿತು. ( ಇದು ಯೋಗೇಂದ್ರ ಯಾದವ್ ಮತ್ತು ಸ್ನೇಹಿತರು ಹುಟ್ಟು ಹಾಕಿದ ಸಂಸ್ಥೆ). ಅದು ಅನೌಪಚಾರಿಕ ಸಮೀಕ್ಷೆಯಾಗಿದ್ದು, ಸಂಪೂರ್ಣ ಬಹುಮತದ ಕೊರತೆ, ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಇಲ್ಲದ ಒಮ್ಮತದ ಕಾರಣದಿಂದಾಗಿ 1999ರವರೆಗೆ ದೇಶವು ಹಲವು ಚುನಾವಣೆಗಳನ್ನು ಕಾಣಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.
ಆಗ ಸಿಎಸ್‍ಡಿಎಸ್ ಸಮೀಕ್ಷೆ ಸಾರಾಂಶದಲ್ಲಿ ನಿಜವಾಗಿತ್ತು. ಅತಂತ್ರ ಫಲಿತಾಂಶ ಬಂದು, ಆಗ ಲೋಕಸಭೆಯಲ್ಲಿ ದೊಡ್ಡ ಪಾರ್ಟಿಯಾದ ಬಿಜೆಪಿ ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರ್ಕಾರ ರಚಿಸಿತ್ತು, ಅದರ ಆಯುಷ್ಯ 13 ದಿನವಾಗಿತ್ತು.

• 1998ರಲ್ಲಿ ದೇಶ ಮತ್ತೆ ಚುನಾವಣೆ ಎದುರಿಸಿದಾಗ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎ ಅಧಿಕಾರಕ್ಕೆ ಬರುವುದಾಗಿ ಭವಿಷ್ಯ ನುಡಿದಿದ್ದವು. ಇಂಡಿಯಾ ಟುಡೇ/ಸಿಎಸ್‍ಡಿಎಸ್, ಡಿಆರ್‍ಎಸ್, ಔಟ್‍ಲುಕ್/ ಎ.ಸಿ. ನೆಲ್ಸನ್ ಮತ್ತು ಫ್ರಂಟ್‍ಲೈನ್/ಸಿಎಂಎಸ್- ಈ ನಾಲ್ಕೂ ಪ್ರಮುಖ ಸಮೀಕ್ಷಾ ಕೂಟಗಳು ವಾಜಪೇಯಿ ನೇತೃತ್ವದಲ್ಲಿ ಎನ್‍ಡಿಎ ಸರಳ ಬಹುಮತ ದಾಟಿ ಆರಾಮಾಗಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದವು. ಆದರೆ, ವಾಜಪೇಯಿ ನೇತೃತ್ವದ ಕೂಟ 252 ಸೀಟು ಪಡೆದು ಬಹುಮತದ ಕೊರತೆ ಎದುರಿಸಿದರೆ, ಕಾಂಗ್ರೆಸ್ 166 ಸೀಟು ಪಡೆದಿತ್ತು.

• 1999ರಲ್ಲಿ ಕಾರ್ಗಿಲ್ ‘ಯುದ್ಧ’ದ ನಂತರ ಭಾರತ ಮತ್ತೆ ಹೊಸ ಪ್ರಧಾನಿಯ ಆಯ್ಕೆಗೆ ಹೋಗಿತ್ತು. ಆ ಚುನಾವಣೆಯಲ್ಲಿ ಎಲ್ಲ ಎಕ್ಸಿಟ್ ಪೋಲ್‍ಗಳು ಎನ್‍ಡಿಎಗೆ ಸ್ಪಷ್ಟ ಬಹುಮತ, 300ಕ್ಕೂ ಹೆಚ್ಚು ಸೀಟು ಎಂದಿದ್ದವು. ಕೊನೆಗೆ ಎನ್‍ಡಿಎಗೆ 296 ಸೀಟು ಸಿಕ್ಕಿದ್ದವು. ಕಾಂಗ್ರೆಸ್ಸೇತರ ಪಕ್ಷಗಳಿಗೆ 113 ಸೀಟು ಸಿಕ್ಕಿದ್ದವು.

• 2004ರ ಚುನಾವಣೆಯಲ್ಲಿ ವಾಜಪೇಯಿ ‘ಸಾಧನೆ’ ಇಟ್ಟಕೊಂಡು ‘ಇಂಡಿಯಾ ಶೈನಿಂಗ್’ ಪ್ರಚಾರ ಶುರುವಾಗಿತ್ತು. ಮತ್ತೆ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರ ಎಂದು ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದ್ದವು. ಆದರೆ, ಇದರಲ್ಲಿ ಫಲಿತಾಂಶ ಉಲ್ಟಾ ಹೊಡೆದಿತ್ತು, ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ದೊಡ್ಡ ಪಾರ್ಟಿಯಾಗಿ, ಯುಪಿಎ ಅಧಿಕಾರಕ್ಕೆ ಬಂದಿತ್ತು.

• 2004ರಿಂದ 2009ರವರೆಗೆ ಮನಮೋಹನಸಿಂಗ್ ಸರ್ಕಾರ. 2009ರಲ್ಲಿ ಮತ್ತೆ ಚುನಾವಣೆ. 2004ರಲ್ಲಿ ಮಾಡಿದ್ದ ತಪ್ಪು ನೆನಪಿಸಿಕೊಂಡ ಸಮೀಕ್ಷಾ ಕಂಪನಿಗಳು, ಆ ಸಲ ಯುಪಿಎ ಮತ್ತು ಎನ್‍ಡಿಎ ನಡುವೆ ನೆಕ್-ಟು-ನೆಕ್ ಸ್ಪರ್ಧೆ ಎಂದು ಹೇಳಿದ್ದವು. ಆದರೆ ಫಲಿತಾಂಶ ಅವುಗಳ ಪಾಲಿಗೆ ಮತ್ತೆ ಉಲ್ಟಾ ಹೊಡೆದಿತ್ತು. ಎ.ಸಿ. ನೆಲ್ಸನ್ ಸಮೀಕ್ಷೆ ಎನ್‍ಡಿಎಗೆ 197, ಯುಪಿಎಗೆ 199 ಸೀಟು ಎಂದು ಹೇಳಿತ್ತು. ಆದರೆ ಫಲಿತಾಂಶದಲ್ಲಿ ಯುಪಿಎಗೆ 262 ಸೀಟು, ಎನ್‍ಡಿಎಗೆ 159 ಸೀಟು ದಕ್ಕಿದ್ದವು. ಕಾಂಗ್ರೆಸ್ 2004ರಲ್ಲಿ ಗೆದ್ದಿದ್ದಕ್ಕಿಂತ 80 ಸೀಟು ಹೆಚ್ಚು ಗೆದ್ದಿದ್ದರೆ, ಎನ್‍ಡಿಎ 30 ಸೀಟು ಕಡಿಮೆ ಗೆದ್ದಿತ್ತು.

• 2014ರಲ್ಲಿ ಯುಪಿಎ ಭ್ರಷ್ಟಾಚಾರ ಮತ್ತು ಮೋದಿ ಹವಾ ಮುಖ್ಯ ವಸ್ತು ಆಗಿದ್ದವು. ಆಗ ಎಲ್ಲ ಎಕ್ಸಿಟ್ ಪೋಲ್‍ಗಳು ಹೇಳಿದಂತೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆಗ ಎರಡು ಸರ್ವೆ ಮಾತ್ರ ಬಿಜೆಪಿಗೆ 280ರಷ್ಟು ಸೀಟು ಬರುವುದನ್ನು ಹೇಳಿದ್ದವು. ಹಾಗೆಯೇ ಕಾಂಗ್ರೆಸ್ 50ರ ಕೆಳಗೆ ಕುಸಿಯಬಹುದು ಎಂಬುದನ್ನು ಯಾವ ಸರ್ವೆಯೂ ಹೇಳಿರಲಿಲ್ಲ.

• ಒಟ್ಟಿನಲ್ಲಿ ಎಕ್ಸಿಟ್ ಪೋಲ್‍ಗಳು ಪಕ್ಕಾ ನಿಖರ ಫಲಿತಾಂಶ ಕೊಟ್ಟಿದ್ದು ಕಡಿಮೆ. ವಿವಿಧ ರಾಜ್ಯಗಳ ಚುನಾವಣಾ ಸಮೀಕ್ಷೆಗಳಲ್ಲೂ ಇದು ವ್ಯಕ್ತವಾಗಿದೆ. ಹಾಗಾಗಿ, ಈ ಎಕ್ಸಿಟ್ ಪೋಲ್‍ಗಳು ಫೈನಲ್ ಅಲ್ಲ, ಅವು ಅಪರೂಪಕ್ಕೊಮ್ಮೆ ನಿಖರ ಆಗಿವೆ. ಆದರೆ ಟ್ರೆಂಡ್ ಗುರುತಿಸಲು ಕೆಲವೊಮ್ಮೆ ಸಹಾಯವಾಗಿರಬಹುದು.

ಜನಪ್ರಿಯ ಅನಿಸಿಕೆ ಅಥವಾ ಪಾಪುಲರ್ ಮೂಡ್ ಆಧಾರದಲ್ಲಿ ಈ ಸಮೀಕ್ಷೆಗಳು ತಮ್ಮ ಸಂಖ್ಯೆಗಳನ್ನು ನೀಡುತ್ತ ಬಂದಿವೆಯಾ? ಹಾಗಿದ್ದಲ್ಲಿ ಇವತ್ತೂ ಅದನ್ನೇ ಹೇಳಿವೆಯಾ? ಯಾವುದಕ್ಕೂ ಮೇ 23ರ ಫಲಿತಾಂಶವೇ ಫೈನಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...