Homeಮುಖಪುಟಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ...

ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ಬಸವರಾಜ ಬೊಮ್ಮಾಯಿಯವರೆ, ಯಡಿಯೂರಪ್ಪನವರೆ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೆ ನೆನಪಿಟ್ಟುಕೊಳ್ಳಿ ಬಹಳ ಕಠಿಣ ಆದೀತು ನಿಮಗೆ ಎಂದು ಜೀವ ಬೆದರಿಕೆ ಹಾಕಿದ್ದಾರೆ..

- Advertisement -
- Advertisement -

ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ? ಎಂದು ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿಯವರೆ, ಯಡಿಯೂರಪ್ಪನವರೆ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೆ ನೆನಪಿಟ್ಟುಕೊಳ್ಳಿ ಬಹಳ ಕಠಿಣ ಆದೀತು ನಿಮಗೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಮುಂದುವರಿದು ಮೊಟ್ಟೆ ಕದ್ದಾಯಿತು. ಮೊಟ್ಟೆಯಲ್ಲಿ ದುಡ್ಡು ಮಾಡಿದವರು ಈಗ ದೇವಸ್ಥಾನಗಳಲ್ಲಿ ದುಡ್ಡು ಮಾಡಲು ಯಾಕೆ ಹೋಗುತ್ತಿದ್ದೀರಿ? ನಿಮ್ಮ ಮೇಲೆ ಕೇಸು ದಾಖಲೆ ಮಾಡಿದ್ದೇವೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ ಸಲ ಚಿತ್ರದುರ್ಗದಲ್ಲಿ ಬಿಜೆಪಿ ಸರ್ಕಾರದಿಂದ ದೇವಸ್ಥಾನದ ಮೇಲಿನ ದಾಳಿ ಖಂಡಿಸಿ ಹೋರಾಟ ಮಾಡಿದ್ದೆವು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ದೇವಸ್ಥಾನ ನೆಲಸಮ ಆಯ್ತು. ಈಗ ಮೈಸೂರಿನಲ್ಲಿ ಪುರಾತನ ದೇವಸ್ಥಾನ ನೆಲಸಮ ಆಯ್ತು. ಅಲ್ಲದೆ ಇನ್ನೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ಕೊಟ್ಟಿದೆ. ಆದರೆ ಎಲ್ಲಾದರೂ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಮಾತ್ರ ಟಾರ್ಗೆಟ್ ಆಗುತ್ತಿವೆ? ಎಂದು ಧರ್ಮೇಂದ್ರ ಹೇಳಿದ್ದಾರೆ.

ಇನ್ನು ದೇಗುಲ ಧ್ವಂಸ ವಿರೋಧಿಸಿ ಬಿಜೆಪಿ, ಸಂಘಪರಿವಾರ ಮತ್ತು ಸಹಪರಿವಾರಗಳಾದ ಹಿಂದೂ ಜಾಗರಣ ವೇದಿಕೆ, ಭಜರಂಗದಳ, ವಿಹಿಂಪ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿವೆ. ಸ್ವಾಮಿ ನಾನು ಕೇಳುತ್ತೇನೆ ರಾಜ್ಯದಲ್ಲಿ ಯಾರ ಸರ್ಕಾರ ಇದೆ? ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದಿದ್ರೆ ಪರಿಸ್ಥಿತಿ ಏನಾಗ್ತಿತ್ತು..? ಕರ್ನಾಟಕ ಹೀಗೆ ಇರುತ್ತಿತ್ತೆ? ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವತ್ತು ಯಾವುದೋ ಒಂದು ವಿಚಾರಕ್ಕೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಜಿಲ್ಲೆಗೆ ಬೆಂಕಿ ಇಡ್ತೇವೆ, ಜಿಲ್ಲೆ ಹೊತ್ತಿ ಉರಿಯುತ್ತೆ ಎಂಬ ಹೇಳಿಕೆ ನೀಡಿದ್ರು. ಇದರರ್ಥ ಏನು? ಇವತ್ತು ಕಾಂಗ್ರೆಸ್ ಆಡಳಿತದಲ್ಲಿ ಇದ್ದಿದ್ರೆ ಮಾತ್ರ ಇವರು ಬೆಂಕಿ ಹಾಕ್ತಿದ್ರು ಎಂದು ಕಿಡಿಕಾರಿದ್ದಾರೆ.

ಪೂರ್ತಿ ವಿಡಿಯೋ ನೋಡಿ

ಧರ್ಮೇಂದ್ರರವರ ಗಾಂಧೀಜಿಯನ್ನೆ ಕೊಂದವರು ನಾವು ಎಂಬ ಹೇಳಿಕೆಗೆ ಮತ್ತು ಪ್ರಚೋದನಾಕಾರಿ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.


ಇದನ್ನೂ ಓದಿ: ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...