Homeಮುಖಪುಟಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ...

ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ಬಸವರಾಜ ಬೊಮ್ಮಾಯಿಯವರೆ, ಯಡಿಯೂರಪ್ಪನವರೆ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೆ ನೆನಪಿಟ್ಟುಕೊಳ್ಳಿ ಬಹಳ ಕಠಿಣ ಆದೀತು ನಿಮಗೆ ಎಂದು ಜೀವ ಬೆದರಿಕೆ ಹಾಕಿದ್ದಾರೆ..

- Advertisement -
- Advertisement -

ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ? ಎಂದು ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿಯವರೆ, ಯಡಿಯೂರಪ್ಪನವರೆ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೆ ನೆನಪಿಟ್ಟುಕೊಳ್ಳಿ ಬಹಳ ಕಠಿಣ ಆದೀತು ನಿಮಗೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಮುಂದುವರಿದು ಮೊಟ್ಟೆ ಕದ್ದಾಯಿತು. ಮೊಟ್ಟೆಯಲ್ಲಿ ದುಡ್ಡು ಮಾಡಿದವರು ಈಗ ದೇವಸ್ಥಾನಗಳಲ್ಲಿ ದುಡ್ಡು ಮಾಡಲು ಯಾಕೆ ಹೋಗುತ್ತಿದ್ದೀರಿ? ನಿಮ್ಮ ಮೇಲೆ ಕೇಸು ದಾಖಲೆ ಮಾಡಿದ್ದೇವೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ ಸಲ ಚಿತ್ರದುರ್ಗದಲ್ಲಿ ಬಿಜೆಪಿ ಸರ್ಕಾರದಿಂದ ದೇವಸ್ಥಾನದ ಮೇಲಿನ ದಾಳಿ ಖಂಡಿಸಿ ಹೋರಾಟ ಮಾಡಿದ್ದೆವು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ದೇವಸ್ಥಾನ ನೆಲಸಮ ಆಯ್ತು. ಈಗ ಮೈಸೂರಿನಲ್ಲಿ ಪುರಾತನ ದೇವಸ್ಥಾನ ನೆಲಸಮ ಆಯ್ತು. ಅಲ್ಲದೆ ಇನ್ನೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ಕೊಟ್ಟಿದೆ. ಆದರೆ ಎಲ್ಲಾದರೂ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಮಾತ್ರ ಟಾರ್ಗೆಟ್ ಆಗುತ್ತಿವೆ? ಎಂದು ಧರ್ಮೇಂದ್ರ ಹೇಳಿದ್ದಾರೆ.

ಇನ್ನು ದೇಗುಲ ಧ್ವಂಸ ವಿರೋಧಿಸಿ ಬಿಜೆಪಿ, ಸಂಘಪರಿವಾರ ಮತ್ತು ಸಹಪರಿವಾರಗಳಾದ ಹಿಂದೂ ಜಾಗರಣ ವೇದಿಕೆ, ಭಜರಂಗದಳ, ವಿಹಿಂಪ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿವೆ. ಸ್ವಾಮಿ ನಾನು ಕೇಳುತ್ತೇನೆ ರಾಜ್ಯದಲ್ಲಿ ಯಾರ ಸರ್ಕಾರ ಇದೆ? ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದಿದ್ರೆ ಪರಿಸ್ಥಿತಿ ಏನಾಗ್ತಿತ್ತು..? ಕರ್ನಾಟಕ ಹೀಗೆ ಇರುತ್ತಿತ್ತೆ? ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವತ್ತು ಯಾವುದೋ ಒಂದು ವಿಚಾರಕ್ಕೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಜಿಲ್ಲೆಗೆ ಬೆಂಕಿ ಇಡ್ತೇವೆ, ಜಿಲ್ಲೆ ಹೊತ್ತಿ ಉರಿಯುತ್ತೆ ಎಂಬ ಹೇಳಿಕೆ ನೀಡಿದ್ರು. ಇದರರ್ಥ ಏನು? ಇವತ್ತು ಕಾಂಗ್ರೆಸ್ ಆಡಳಿತದಲ್ಲಿ ಇದ್ದಿದ್ರೆ ಮಾತ್ರ ಇವರು ಬೆಂಕಿ ಹಾಕ್ತಿದ್ರು ಎಂದು ಕಿಡಿಕಾರಿದ್ದಾರೆ.

ಪೂರ್ತಿ ವಿಡಿಯೋ ನೋಡಿ

ಧರ್ಮೇಂದ್ರರವರ ಗಾಂಧೀಜಿಯನ್ನೆ ಕೊಂದವರು ನಾವು ಎಂಬ ಹೇಳಿಕೆಗೆ ಮತ್ತು ಪ್ರಚೋದನಾಕಾರಿ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.


ಇದನ್ನೂ ಓದಿ: ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...