Homeಮುಖಪುಟಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

ಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

- Advertisement -
- Advertisement -

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರನ್ನು ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ ಅವರನ್ನು ನಟಿಯ ಪತಿ ರಿತೇಶ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ರಾಖಿ ಸಾವಂತ್‌ ಪತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ, ನವಜೋತ್ ಸಿಂಗ್ ಸಿಧುರನ್ನು ಟೀಕಿಸುವ ಭರದಲ್ಲಿ ನಟಿ ರಾಖಿ ಸಾವಂತ್ ಅವರಿಗೆ ಹೋಲಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ್ಲಲಿ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

ವಿವಾದಿತ ಕೃಷಿ ಕಾನೂನುಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ದ್ವಿಮುಖ ನಿರ್ಧಾರಗಳನ್ನು ಪ್ರಶ್ನಿಸಿ ವಿಡಿಯೋ ಮಾಡಿದ್ದ ನವಜೋತ್ ಸಿಂಗ್ ಸಿಧುರನ್ನು, ’ಪಂಜಾಬ್ ರಾಜಕಾರಣದ ರಾಖಿ ಸಾವಂತ್‌ ’ ಎಂದು ರಾಘವ್ ಚಡ್ಡಾ ಕರೆದಿದ್ದರು.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

 

View this post on Instagram

 

A post shared by Rakhi Sawant (@rakhisawant2511)


ರಾಘವ್ ಚಡ್ಡಾಗೆ ರಿತೇಶ್ ಪ್ರತಿಕ್ರಿಯಿಸಿರುವ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಖಿ ಸಾವಂತ್‌, “ನನ್ನ ಪತಿ ರಾಘವ್ ಚಡ್ಡಾಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯವರೆಗೆ ನಾನು ಒಬ್ಬಂಟಿಯಾಗಿದ್ದರಿಂದ ಜನರು ನನ್ನನ್ನು ಹಿಂಸಿಸುತ್ತಿದ್ದರು. ಇಂದು ಇದನ್ನು ಹೇಳುತ್ತಾ ನನ್ನ ಕಣ್ಣಲ್ಲಿ ಕಣ್ಣೀರು ಬರುತ್ತಿದೆ. ನನ್ನ ಜೊತೆಗೆ ಯಾರೋ ಇದ್ದಾರೆ, ನನ್ನ ಘನತೆ, ಗೌರವದ ರಕ್ಷಣೆಗಾಗಿ ಜೊತೆಗೆ ನಿಂತಿದ್ದಾರೆ. ನನ್ನ ಪ್ರೀತಿಯ ಗಂಡನಿಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿ ಶಾಸಕ ರಾಘವ್ ಚಡ್ಡಾ ವಿರುದ್ಧ ನಿಂತ ತಮ್ಮ ಪತಿ ರಿತೇಶ್ ಅವರಿಗೆ ನಟಿ ಧನ್ಯವಾದ ಸಲ್ಲಿಸಿದ್ದಾರೆ.

ರಾಘವ್ ಚಡ್ಡಾ ವಿರುದ್ಧ@riteshuk1 ಬಳಕೆದಾರರ ಹೆಸರಿನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ. “ರಾಘವ್ ಚಡ್ಡಾ, ದಯವಿಟ್ಟು ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ !! ನಿಮ್ಮ ರಾಜಕೀಯ ವಿವಾದಗಳಲ್ಲಿ ನೀವು ನನ್ನ ಹೆಂಡತಿಯ ಹೆಸರನ್ನು ಮತ್ತೊಮ್ಮೆ ಬಳಸಿದರೆ, ನೀವು ಕಾನೂನು ಸಮಸ್ಯೆಯನ್ನು ಎದುರಿಸುತ್ತೀರಿ. ನಾನು ಮತ್ತೆ ಹೇಳುತ್ತೇನೆ, ನೀವು ಮತ್ತೆ ಎಂದಿಗೂ ಗೆಲ್ಲುವುದಿಲ್ಲ. ಏಕೆಂದರೆ ನೀವು ಆ ಸ್ಥಾನಕ್ಕೆ ಅರ್ಹರಲ್ಲ. ನೀವು ಇನ್ನೊಬ್ಬರ ಹೆಸರನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ಟ್ವೀಟ್ ಮಾಡಲಾಗಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ರಾಘವ್ ಚಡ್ಡಾ, “ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ. ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...