Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...