Homeಮುಖಪುಟಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

- Advertisement -
- Advertisement -

ಲಿಂಗ ಸಮಾನತೆ ಸಂದೇಶ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಚಾಕೋಲೆಟ್ ಜಾಹೀರಾತಿಗೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ ಎಂದರೆ ಪುರುಷರಷ್ಟೇ ಎಂದು ಭಾವಿಸಿರುವ ಸಮಾಜದಲ್ಲಿ ಕ್ಯಾಡ್‌ಬರಿಯ ನೂತನ ಜಾಹೀರಾತು ಲಿಂಗ ಸಮಾನತೆಯ ಆಶಯವನ್ನು ಎತ್ತಿ ಹಿಡಿದಿದೆ. ಜಾಹೀರಾತು ವೀಕ್ಷಿಸಿದ ಸಹಸ್ರಾರು ಜನರು ಭಾವುಕರಾಗಿದ್ದಾರೆ. ಈ ಜಾಹೀರಾತನ್ನು ನೋಡಿ ಕಣ್ತುಂಬಿ ಬಂತು ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಕಮೆಂಟ್ ಮಾಡಿದ್ದಾರೆ.

ಏನಿದು ಜಾಹೀರಾತು?

ನೆನಪುಗಳೊಂದಿಗೆ ಬೆರೆತ ನಗು-ಅಳು ಮಿಶ್ರಿತ ಭಾವ (ನಾಸ್ಟಾಲ್ಜಿಯಾ) ಸೃಷ್ಟಿಸಿರುವ ಈ ಜಾಹೀರಾತು, 90ರ ದಶಕ ಹಾಗೂ 2021ನೇ ಇಸವಿಯ ನಡುವೆ ಆಗಿರುವ ಬದಲಾವಣೆಯನ್ನು ಒಳಗೊಂಡಿದೆ. ಈಗಿನ ಜಾಹೀರಾತು ಕ್ರಿಕೆಟ್‌ನಲ್ಲಿ ಮಹಿಳೆಯರೂ ಸಾಧನೆ ಮಾಡಿರುವುದನ್ನು ಬಿಂಬಿಸುತ್ತದೆ. ಹಿಂದೆ ಕೇವಲ ಪುರುಷರಷ್ಟೇ ಕ್ರೀಡಾಂಗಣದ ಮೇಲೆ ಹಿಡಿತ ಸಾಧಿಸಿದ್ದರು. 2021ನೇ ಇಸವಿಯಲ್ಲಿ ಹೆಣ್ಣುಮಕ್ಕಳೂ ಸಾಧನೆಗೈದಿದ್ದಾರೆ ಎಂಬ ಸಮಾನತೆಯ ಸಂದೇಶವನ್ನು ಕ್ಯಾಡ್‌ಬರಿ ಕಟ್ಟಿಕೊಟ್ಟಿರುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ.

90ರ ದಶಕದ ಹಿನ್ನೆಲೆಯ ಹಳೆಯ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಬ್ಯಾಟ್‌ಮನ್‌ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆತ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವತಿ ಕ್ಯಾಡ್‌ಬರಿ ಡೈರಿ ಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾಳೆ. ಮೈದಾನದೊಳಗೆ ಯುವತಿ ಬಾರದಂತೆ ತಡೆಯಲು ಸೆಕ್ಯುರಿಟಿ ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವತಿಯ ಉತ್ಸಾಹವನ್ನು ನೋಡಿ ಖುಷಿ ಪಡುತ್ತಾರೆ”.

2021ರ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಆಟಗಾರ್ತಿ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆಕೆ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕ ಕ್ಯಾಡ್‌ಬರಿ ಡೈರಿಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾನೆ. ಸೆಕ್ಯುರಿಟಿ ತಡೆಯಲು ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವಕನ ಖುಷಿಯನ್ನು ನೋಡಿ ತಾವೂ ಖುಷಿಪಡುತ್ತಾರೆ”

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ  ಕ್ಯಾಡ್‌ಬರಿ ಡೈರಿ ಮಿಲ್ಕ್‌ ಸಂಸ್ಥೆಯು, “ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿರುವ ನಮ್ಮ ಯುವತಿಯರ ಅದ್ಭುತ ಯಶಸ್ಸನ್ನು ಆಚರಿಸಲು, ಖುಷಿಪಡಲು ಕ್ಯಾಡ್‌ಬರಿ ಡೈರಿಮಿಲ್ಕ್‌‌ ಸವಿಯೋಣ” ಎಂದು ಹೇಳಿದೆ.


ಇದನ್ನೂ ಓದಿ: ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...