Homeಮುಖಪುಟಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಮಾನತೆಯ ಹರಿಕಾರ ಪೆರಿಯಾರ್‌ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಆಚರಿಸಿದೆ. ಆದರೆ ತಮಿಳುನಾಡು ನಿಜಕ್ಕೂ ಸಾಮಾಜಿಕ ನ್ಯಾಯವನ್ನು ಸಾಧಿಸಿದೆಯೇ?

- Advertisement -
- Advertisement -

ಸಮಾನತೆಯ ಹರಿಕಾರ, ದ್ರಾವಿಡ ಚಳವಳಿಯ ನೇತಾರ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಘೋಷಿಸಿದೆ. ಅದರಂತೆ ಅವರ ಜನ್ಮದಿನವನ್ನು ಈ ಬಾರಿ ಆಚರಿಸಲಾಗಿದೆ.

ಎಂ.ಕೆ.ಸ್ಟಾಲಿನ್‌ ನಾಯಕತ್ವದಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿರುವುದು ಆಶಾದಾಯ ಬೆಳೆವಣಿಗೆ. ಆದರೆ ತಮಿಳುನಾಡಿನಲ್ಲಿ ಬೇರು ಬಿಟ್ಟಿರುವ ಮೌಢ್ಯ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ಮೊದಲಾದ ಸಾಮಾಜಿಕ ಸಂಗತಿಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಸಾಮಾಜಿಕ ನ್ಯಾಯದಿನದ ಹಿನ್ನೆಲೆಯಲ್ಲಿ ‘ದಿ ಕ್ವಿಂಟ್’ ಸುದ್ದಿ ಜಾಲತಾಣದಲ್ಲಿ ಪ್ರಕಟವಾಗಿರುವ ಸ್ಮಿತಾ ಟಿ.ಕೆ. ಅವರ ಲೇಖನವು, ತಮಿಳುನಾಡು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ಹೋರಾಟಗಾರರ ಮೇಲೆ ದಾಖಲಾಗಿದ್ದ 5,570 ಪ್ರಕರಣ ಹಿಂಪಡೆದ ತಮಿಳುನಾಡು ಸರ್ಕಾರ

ಜಾತಿ ಪ್ರೇರಿತ ಕೊಲೆಗಳ ಕುರಿತು ಕೆಲಸ ಮಾಡುತ್ತಿರುವ ಕಾತಿರ್ ಆಫ್ ಎವಿಡೆನ್ಸ್ ಸಂಘಟನೆಯ ಪ್ರಕಾರ, 2013ರಿಂದ 2017ರ ಅವಧಿಯಲ್ಲಿ ಒಟ್ಟು 187 ಮರ್ಯಾದೆ ಹೆಸರಲ್ಲಿ ಹತ್ಯೆಗಳು ನಡೆದಿವೆ. ಅದರಲ್ಲಿ ಸಾವಿಗೀಡಾದವರು ಶೇ. 80 ಮಂದಿ ಮಹಿಳೆಯರಾಗಿದ್ದಾರೆ. ಇದು ಅಧಿಕೃತವಾಗಿ ದಾಖಲಾಗಿರುವ ವರದಿಯಷ್ಟೇ. ಬಹುತೇಕ ಕೊಲೆಗಳು ಆತ್ಮಹತ್ಯೆ ಎಂದೋ, ಸಹಜ ಸಾವೆಂದೋ ವರದಿಯಾಗುತ್ತಿವೆ ಎನ್ನಲಾಗಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ನೀಡಿದ 2020ರ ವರದಿಯ ಪ್ರಕಾರ ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. 2019ರಲ್ಲಿ 15.6ರಷ್ಟಿದ್ದ ಈ ಪ್ರಮಾಣ 2020ರಲ್ಲಿ 17.4ರಷ್ಟಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ 2019ರಲ್ಲಿ 4,139 ಇದ್ದದ್ದು, 2020ರಲ್ಲಿ 4,338ರಷ್ಟಾಗಿದೆ.

“ಶೇ. 50ರಷ್ಟು ಮಹಿಳಾ ಪ್ರಾತಿನಿಧ್ಯ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಇರಬೇಕೆಂದು ಪೆರಿಯಾರ್ ಪ್ರತಿಪಾದಿಸಿದ್ದರು. ಮಹಿಳೆಯರನ್ನು ಅಡುಗೆ ಮನೆಯಿಂದ ಹೊರತಂದು ಸ್ವಾತಂತ್ರ್ಯ ನೀಡಬೇಕು ಎನ್ನುತ್ತಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಡಿಎಂಕೆ ನೇತೃತ್ವದ ಈಗಿನ ಸರ್ಕಾರದಲ್ಲಿನ 33 ಸಚಿವರಲ್ಲಿ ಇಬ್ಬರು ಮಾತ್ರ ಮಹಿಳೆಯರಿದ್ದಾರೆ” ಎಂದು ಸ್ಮಿತಾ ಉಲ್ಲೇಖಿಸಿದ್ದಾರೆ.

ಜಾತಿ ನಿರ್ಮೂಲನೆ ಮಾಡಬೇಕೆಂದು ಸರ್ಕಾರವೇನೋ ಹೆಜ್ಜೆ ಇರಿಸಿದೆ. ಆದರೆ ತಮಿಳುನಾಡಿನ ಜಾತಿ ವ್ಯವಸ್ಥೆ ಆತಂಕಕಾರಿಯಾದದ್ದು. ಎನ್‌‌ಸಿಆರ್‌ಬಿ ವರದಿಯ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗಗಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. 2019ರಲ್ಲಿ 1,144 ಪ್ರಕರಣಗಳಿದ್ದವು, 2020ರಲ್ಲಿ 1,274 ಪ್ರಕರಣಗಳು ವರದಿಯಾಗಿವೆ.

ವಣ್ಣಿಯಾರ್ಸ್ ಮೇಲ್ವರ್ಗಕ್ಕೆ ಸೇರಿದ 20 ಜನರ ಗುಂಪು ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ದಲಿತ ಯುವಕರನ್ನು ಕೊಂದಿರುವ ಘಟನೆ ಕಳೆದ ಅಂಬೇಡ್ಕರ್ ಜಯಂತಿಯಂದು ನಡೆದುಹೋಯಿತು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರಿಯಾದ ಕ್ರಮ ಜರುಗಿಸದ ಕಾರಣ ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಸಫಾಯಿಗಳು ತಮಿಳುನಾಡಿನಲ್ಲೇ ಸಾವನ್ನಪ್ಪಿದ್ದಾರೆ ಎನ್ನುತ್ತದೆ ವರದಿ.

1993ರಿಂದ 2019ರವರೆಗೆ ದೇಶದ 18 ರಾಜ್ಯಗಳಲ್ಲಿ ಎಷ್ಟು ಸಫಾಯಿಗಳು ಸಾವನ್ನಪ್ಪಿದ್ದಾರೆಂದು ಸರ್ಕಾರ ಸಮೀಕ್ಷೆ ನಡೆಸಿದಾಗ 206 ಮಂದಿ ಸಫಾಯಿಗಳು ತಮಿಳುನಾಡಿನಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಜನಪರ ಕೆಲಸಗಳನ್ನು ಮಾಡುತ್ತಿರುವ ತಮಿಳುನಾಡು ಸರ್ಕಾರ, ಇಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕು. ಪೆರಿಯಾರ್ ಥರದ ಮಹನೀಯರು ನೆಡೆದಾಡಿದ ನೆಲದಲ್ಲಿ ಮೌಢ್ಯಗಳು ತೊಗಲಬೇಕು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ದೊರಕುವಂತಾಗಬೇಕು. ಡಿಎಂಕೆ, ಎಐಡಿಎಂಕೆ ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷ ಸ್ಥಾನದಲ್ಲಿರಲಿ ರಾಜ್ಯವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರಿಗೂ ಇರುತ್ತದೆ. ಹೀಗಾಗಿ ಇಲ್ಲಿನ ಬಹುತೇಕ ಅಂಕಿ-ಅಂಶಗಳು ಎಐಎಡಿಎಂ ಅವಧಿಗೆ ಸಂಬಂಧಿಸಿವೆ ಎಂದು ಸುಮ್ಮನಾಗಲು ಸಾಧ್ಯವಿಲ್ಲ.

ಈಗ ಅಧಿಕಾರ ಹಿಡಿದಿರುವ ಡಿಎಂಕೆ ಹೊಸ ಭರವಸೆಗಳನ್ನು ಹುಟ್ಟು ಹಾಕಿದೆ. ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸದ್ಯಕ್ಕೆ ಜನಮಾನಸಕ್ಕೆ ಲಗ್ಗೆ ಇಡುತ್ತಿರುವ ಸ್ಟಾಲಿನ್, ತಮಿಳುನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ತಮ್ಮ ಕೈಲಾದ ಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕ್ರಾಂತಿ ರಾತ್ರಿ ಬೆಳಗಾಗುವುದರೊಳಗೆ ಆಗುವುದು ಅಸಾಧ್ಯ. ಈ ಪೋಸ್ಟ್ ಟ್ರೂತ್ ಕಾಲದಲ್ಲಂತೂ ಬದಲಾವಣೆಗೆ ಹೆಚ್ಚಿನ ಶ್ರಮವಂತೂ ಅಗತ್ಯ ಎನ್ನುತ್ತಾರೆ ಪ್ರಜ್ಞಾವಂತರು.

(ಮಾಹಿತಿ ಕೃಪೆ: ಸ್ಮಿತಾ ಕೆ.ಎಸ್., ದಿ ಕ್ವಿಂಟ್‌‌)


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...