Homeಚಳವಳಿಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

’ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ’

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಸಂಯುಕ್ತ ಹೋರಾಟ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಭಾರತ್ ಬಂದ್ ಪೂರಕವಾಗಿ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಇಂದು (ಭಾನುವಾರ) ಸಂಯುಕ್ತ ಹೋರಾಟ ಕರ್ನಾಟಕ  ಆನ್‌ಲೈನ್ ಬಹಿರಂಗ ಸಭೆ ನಡೆಸಿದೆ.

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ದೇಶದಲ್ಲಿ ರೈತರ ಸತ್ಯಾಗ್ರಹ ಆರಂಭವಾಗಿ 10 ತಿಂಗಳಾಗುತ್ತಾ ಬಂದಿದೆ. ಭಾರತ ಸರ್ಕಾರ ರೈತರ ಧ್ವನಿಗೆ ಒಗುಡುತ್ತಿಲ್ಲ. ಭಾರತ ಸರ್ಕಾರ ರೈತರ ಪರ ಇಲ್ಲ. ರೈತರನ್ನು ಕೀಟಲೆ ಮಾಡುತ್ತಿದೆ. ರೈತರ ಬಗ್ಗೆ ಅವರಿಗಿರುವ ತಿರಸ್ಕಾರ ಭಾವನೆ ಇದು. ಈಗಾಗಲೇ ಹಲವು ಭಾರಿ ಸರ್ಕಾರವನ್ನು ಎಚ್ಚರಿಸಲು ರೈತರು ಪ್ರಯತ್ನಿಸಿದ್ದರೂ ಅವರು ಎಚ್ಚರಗೊಳ್ಳುತ್ತಿಲ್ಲ. ಹಾಗಾಗಿ ದೇಶದ ರೈತರು 27 ರಂದು ರಸ್ತೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು” ಎಂದರು.

“ಕರ್ನಾಟಕದ ಚಳುವಳಿಗಾರ ಮುಂದಿರುವ ಸವಾಲು ಎಂದರೆ ಕರ್ನಾಟಕ ಬಂದ್. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ಮುಖ್ಯ. ಬೆಂಗಳೂರು, ನಮ್ಮ ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯದಲ್ಲಿಯೂ ಬಂದ್ ಯಶಸ್ವಿಯಾಗಬೇಕು. ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾಥಿ ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

“ಕೇಂದ್ರ, ಜಿಲ್ಲಾ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ತಡೆ ಹಾಕಲು ಪ್ರಯತ್ನಿಸುತ್ತವೆ. ಹಾಗಾಗಿ ನಾವು ನಾಗರಿಕರ ಮನವೊಲಿಸಲು ಮುಂದಾಗಬೇಕು. ಈ ಸೆ.27 ದೇಶಕ್ಕೆ ಮಹತ್ತರ ಸಂದೇಶ ನೀಡಬೇಕು” ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

“ವಿಪಕ್ಷಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ ಬಗ್ಗೆ ಮಾತ್ರ ಮಾತನಾಡುತ್ತಿವೆ. ಆದರೆ, ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪನಿಗಳುಗೆ ದಾರೆ ಎರೆಯುತ್ತಿರುವ ಬಗ್ಗೆ ನಾವು ನಾಗರಿಕರಿಗೆ  ಮನವರಿಕೆ ಮಾಡಬೇಕು. ನಾವು ನಾಗರಿಕರಾಗಿ ಸರ್ಕಾರ ಮಾಡುವ ತಪ್ಪುಗಳಿಂದ ನಮ್ಮ ಬದುಕಿನ ನೆಲೆ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು” ಎಂದರು.

” ಈ ಹಿನ್ನೆಲೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಶಾಲಾ ಕಾಲೇಜು ಮಟ್ಟದಲ್ಲಿ ಎಲ್ಲರಿಗೂ ಬಂದ್‌ ಬಗ್ಗೆ ಜೊತೆಗೆ ಕೃಷಿ ಮೇಲೆ ಒಕ್ಕೂಟ ಸರ್ಕಾರ ತಂದಿರುವ ಕಾನೂನುಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕು. ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಸಂಯುಕ್ತ ಹೋರಾಟ ವೇದಿಕೆ ಕರೆ ನೀಡಿರುವ ಸಂಪೂರ್ಣ ಯಶಸ್ವಿಯಾಗಬೇಕು. ಇದಕ್ಕೆ ನಾವೇಲ್ಲರು ಪ್ರಯತ್ನ ಪಡೆಬೇಕು” ಎಂದು ಹೇಳಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆ ಸಂಯುಕ್ತ ಹೋರಾಟ, ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿದೆ. ಅದರ ಸಿದ್ಧತೆಯ ಭಾಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ರೈತ, ದಲಿತ, ಮಹಿಳಾ, ಕಾರ್ಮಿಕ, ವಿದ್ಯಾರ್ಥಿ-ಯುವಜನರ ಸಂಘಟನೆಗಳು ಒಗ್ಗೂಡಿ ಪೂರ್ವಭಾವಿ ಸಭೆಗಳನ್ನು ನಡೆಸಿವೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಕರ್ನಾಟಕ ಬಂದ್ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತಯಾರಿಗಳು ಪ್ರಾರಂಭಗೊಂಡಿವೆ.

ಬಹಿರಂಗ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ, ಆರ್‌ಕೆಎಸ್‌ನ ದಿವಾಕರ್‌, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ದಲಿತ ಸಂಘಟನೆ ವಕ್ಕೂಟದ ಮಾವಳ್ಳಿ ಶಂಕರ್ ಭಾಗವಹಿಸಿದ್ದರು.

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಬೆಂಗಳೂರಿನ  ಫ್ರೀಡಂ ಪಾರ್ಕ್ ಒಳಾವರಣದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಮಾಲೀ ಪಾಟೀಲ್, ಮೈಕೆಲ್ ಫರ್ನಾಂಡೀಸ್, ಎಸ್.ಆರ್.ಹಿರೇಮಠ ಅವರಿದ್ದ ಅಧ್ಯಕ್ಷೀಯ ಮಂಡಳಿ ಸೆ.16 ರಂದು ಸಮಾಲೋಚನಾ ಸಭೆ ನಡೆಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...