Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...