Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...