Homeಮುಖಪುಟಸಾಮಾನ್ಯ ಮನುಷ್ಯನನ್ನು ಕಾಂಗ್ರೆಸ್ ಪಕ್ಷವು ಸಿಎಂ ಮಾಡಿದೆ: ಚರಣ್‌‌ಜಿತ್‌ ಸಿಂಗ್‌ ಚನ್ನಿ

ಸಾಮಾನ್ಯ ಮನುಷ್ಯನನ್ನು ಕಾಂಗ್ರೆಸ್ ಪಕ್ಷವು ಸಿಎಂ ಮಾಡಿದೆ: ಚರಣ್‌‌ಜಿತ್‌ ಸಿಂಗ್‌ ಚನ್ನಿ

- Advertisement -
- Advertisement -

ನಾನೊಬ್ಬ ಆಮ್ ಆದ್ಮಿ (ಸಾಮಾನ್ಯ ಮನುಷ್ಯ). ಕಾಂಗ್ರೆಸ್ ಪಕ್ಷವು ಸಾಮಾನ್ಯ ಮನುಷ್ಯನನ್ನು ಸಿಎಂ ಮಾಡಿದೆ ಎಂದು ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ಚರಣ್‌‌ಜಿತ್‌ ಸಿಂಗ್‌ ಚನ್ನಿ ತಿಳಿಸಿದ್ದಾರೆ.

“ಒಂದಾನೊಂದು ಕಾಲದಲ್ಲಿ ನಮ್ಮ ಮನೆಗೆ ಚಾವಣಿ ಇರಲಿಲ್ಲ. ನಾನು ಮತ್ತು ನಮ್ಮ ಅಮ್ಮ ಸೇರಿ ಮಣ್ಣಿಗಿಂತ ಗೋಡೆ ಪ್ಲಾಸ್ಟಿಂಗ್ ಮಾಡುತ್ತಿದ್ದೆವು. ಅಂತಹ ಬಡತನದ ಪರಿಸ್ಥಿತಿಯಿಂದ ಬೆಳೆದುಬಂದ ನಾನು ಇಂದು ರಾಜ್ಯವೊಂದರ ಸಿಎಂ ಆಗಿದ್ದೇನೆ ಎಂದರೆ ಅದಕ್ಕೆ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಕಾರಣ” ಎಂದಿದ್ದಾರೆ.

ಇಂದು ಬೆಳಿಗ್ಗೆ ಪಂಜಾಬ್‌ನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಅವರು, “ನಾನು ಬಡವರನ್ನು ಪ್ರತಿನಿಧಿಸುತ್ತೇನೆ. ರಾಜ್ಯದಲ್ಲಿ ಸಾಮಾನ್ಯ ಜನರ ಆಡಳಿತವು ಆರಂಭಗೊಂಡಿದೆ. ಸಿಎಂ ಅಥವಾ ಕ್ಯಾಬಿನೆಟ್‌ಗಿಂತಲೂ ಪಕ್ಷವು ಸುಪ್ರೀಂ. ಪಕ್ಷದ ಸಿದ್ಧಾಂತದಂತೆ ಸರ್ಕಾರ ಕೆಲಸ ಮಾಡುತ್ತದೆ” ಎಂದಿದ್ದಾರೆ.

ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್ ಜನರಿಗಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ನಾವು ಅವರ ಕೆಲಸವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ. ಅಲ್ಲದೆ ಹೋರಾಟನಿರತ ರೈತರ ಪರವಾಗಿದ್ದು, ಕೃಷಿ ಕಾನೂನುಗಳ ರದ್ದತಿಗಾಗಿ ಕೆಲಸ ಮಾಡುತ್ತೇವೆ. ಚುನಾವಣಾ ಘೋಷಣೆಯಂತೆ ಬಡವರ ನೀರಿನ ಬಿಲ್ ಮನ್ನಾ ಮಾಡುತ್ತೇವೆ” ಎಂದು ಘೋಷಿಸಿದ್ದಾರೆ.

“ರೈತ ಮತ್ತು ದಮನಕ್ಕೊಳಗಾದ ಯಾರೇ ಆಗಲಿ ನಾನು ಸಾಮಾನ್ಯ ಜನರ ಪ್ರತಿನಿಧಿಯಾಗಿದ್ದೇನೆ. ನಾನು ಶ್ರೀಮಂತರ ಪ್ರತಿನಿಧಿಯಲ್ಲ. ಮರಳು ಗಣಿಗಾರಿಕೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರು ನನ್ನ ಬಳಿಗೆ ಬರಬೇಡಿ. ನಾನು ನಿಮ್ಮ ಪ್ರತಿನಿಧಿಯಲ್ಲ” ಎಂದಿದ್ದಾರೆ.

58 ವರ್ಷದ ಚನ್ನಿ, ಪಂಜಾಬ್ ನ 16 ನೇ ಮುಖ್ಯಮಂತ್ರಿಯಾಗಿದ್ದಾರೆ. ಜೊತೆಗೆ ಪಂಜಾಬ್‌ ಉಪಮುಖ್ಯಮಂತ್ರಿಗಳಾಗಿ ಸುಖಜಿಂದರ್ ಸಿಂಗ್ ರಾಂಧವಾ ಮತ್ತು ಒಪಿ ಸೋನಿಯವರನ್ನು ಆಯ್ಕೆ ಮಾಡಲಾಗಿದೆ.

ಇಂದಿನ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಂಜಾಬ್ ರಾಜ್ಯಪಾಲ ಭನ್ವಾರಿ ಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಚೆನ್ನಿ ಆಪ್ತ ಹಾಗೂ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜ್ಯೋತ್‌ಸಿಂಗ್ ಸಿದು ಉಪಸ್ಥಿತರಿದ್ದರು. ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾರ್ಯಕ್ರಮದಿಂದ ದೂರ ಉಳಿದಿದ್ದರು.


ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...