Homeಮುಖಪುಟನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಹುತೇಕ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

- Advertisement -
- Advertisement -

ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ವಿಶ್ವವಿದ್ಯಾನಿಲಯವಾಗಿ ಘೋಷಿಸಲಾಗಿದ್ದು, ವಿವಿಗೆ ಬೇಕಾಗಿರುವ ಜಾಗಕ್ಕಾಗಿ ಐತಿಹಾಸಿಕ ಹಿನ್ನೆಲೆ ಇರುವ ಸರ್ಕಾರಿ ಕಲಾ ಕಾಲೇಜನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿ  ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈಚೆಗೆ ಪ್ರತಿಭಟನೆ ನಡೆಸಿದ್ದು, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜನ್ನು ಇತ್ತೀಚೆಗೆ ನೃಪತುಂಗ ಯೂನಿವರ್ಸಿಟಿ ಎಂದು ಮಾಡಲಾಗಿದೆ. ಈ ಕಾಲೇಜಿನ ಅಂದಾಜು ಜಾಗ ಕೇವಲ 3.7 ಎಕರೆ ಇದೆ. ಹೀಗಿದ್ದರೂ ಸರ್ಕಾರಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ‌ ಮಾಡಿದ್ದಾರೆ. ಒಂದು ಯೂನಿವರ್ಸಿಟಿ ಮಾಡಲು ಕನಿಷ್ಠ 10 ಎಕರೆ ಜಾಗ ಬೇಕು ಎಂದು ರಾಜ್ಯ ಸರ್ಕಾರದ ಆದೇಶ ಇದೆ. ನೃಪತುಂಗ ಯೂನಿವರ್ಸಿಟಿ ಈಗ ಕೇವಲ 3.7 ಎಕರೆ ಜಾಗ ಹೊಂದಿದ್ದು, ಪಕ್ಕದ ಸರ್ಕಾರಿ ಕಲಾ ಕಾಲೇಜಿನ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗಿರುವುದು ದುರದೃಷ್ಟಕರ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಮ್ಮ ಕಾಲೇಜಿನ ಜಾಗ ಹೇಗೆ ಒತ್ತುವರಿ ಮಾಡಿಕೊಳ್ಳುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಕಾಲೇಜು ತರಗತಿಗಳು ನಡೆಯುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ಯೂನಿವರ್ಸಿಟಿಯನ್ನಾಗಿ ಮಾಡಿದೆ. ಈ ವೇಳೆ ನೃಪತುಂಗ ಯೂನಿವರ್ಸಿಟಿ ಉಪಕುಲಪತಿ ಶ್ರೀನಿವಾಸ್ ಬಳ್ಳಿ ನಕಲಿ ದಾಖಲೆ ಸೃಷ್ಟಿಸಿ ನಮ್ಮದು 11 ಎಕರೆ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ ಬಳ್ಳಿ ಸೃಷ್ಟಿಸಿದ ನಕಲಿ‌ ದಾಖಲೆಗಳ ಆಧಾರದ ಮೇರೆಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಮಹೇಶ್ ಒಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಧೀನ ಕಾರ್ಯದರ್ಶಿ  ಹೊರಡಿಸಿದ ಆದೇಶ ಪ್ರತಿಯಲ್ಲಿ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಯೂನಿವರ್ಸಿಟಿಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

“ಸರ್ಕಾರಿ ಕಲಾ ಕಾಲೇಜು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಹಿಂದೆಯೇ ಸರ್ಕಾರ ಕಲಾ ಕಾಲೇಜು‌ ಜಾಗದ ಮೇಲೆ ಪ್ರಭಾವಿ ರಾಜಕಾರಣಿಗಳ ಕಣ್ಣು ಬಿದ್ದಿತ್ತು. ಈಗಾಗಲೇ ಸರ್ಕಾರವು ಕಲಾ ಕಾಲೇಜಿನ ಒಂದಷ್ಟು ಜಾಗವನ್ನು ಸಿವಿಲ್ ಕೋರ್ಟ್, ಬೆಂಗಳೂರು ಮೆಟ್ರೋ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಟ್ಟಿದ್ದಾರೆ. ಈಗ ಸರ್ಕಾರ ಕಲಾ ಕಾಲೇಜಿನಲ್ಲಿ ಇರುವುದು 7 ಎಕರೆ ಜಾಗ. ಈ ಜಾಗವನ್ನು ಅಧಿಕಾರದ ದುರಾಸೆಗಾಗಿ ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ್ ಬಳ್ಳಿ ಮತ್ತು ಹಲವು ಅಧಿಕಾರಿಗಳು ಕಬಳಿಸಲು ಮುಂದಾಗಿದ್ದಾರೆ ಎನ್ನುವುದು ವಿದ್ಯಾರ್ಥಿಗಳ ಆಕ್ರೋಶ.

****

ಐತಿಹಾಸಿಕ ಕಾಲೇಜು; ಬಡವರ ಪಾಲಿನ ದೀಪ

ಸರ್ಕಾರಿ ಕಲಾ ಕಾಲೇಜು 1886ರಲ್ಲಿ ಪ್ರಾರಂಭವಾಯಿತು. ಬ್ರಿಟೀಷ್ ಆಳ್ವಿಕೆಯಲ್ಲಿ ಪ್ರೌಢ ಶಾಲೆ ಎಂದು ಕರೆಯಲಾಯಿತು. ಮತ್ತು ಇದನ್ನು 1927ರಲ್ಲಿ ಮಧ್ಯಂತರ ಕಾಲೇಜು ಎಂದು ಕರೆಯಲಾಯಿತು. 1957ರಲ್ಲಿ ಜ್ಞಾನ ಕಾಲೇಜು ಶುರು ಆಯಿತು. ನಂತರ 1971ರಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಾಗಿ ಇಬ್ಬಾಗವಾಗಿರುತ್ತದೆ.
ಸರ್ಕಾರಿ ಕಲಾ ಕಾಲೇಜು, ಈಗಿನ ಸರ್ಕಾರಿ ಕಾಲೇಜು ಹಿಂದಿನ ಮೈಸೂರು ಸಂಸ್ಥಾನದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಒಂದಾಗಿದ್ದ ಬೆಂಗಳೂರು ಜಿಲ್ಲೆಯ ಪ್ರತಿಷ್ಟಿತ ಶೈಕ್ಷಣಿಕ ಸರ್ಕಾರಿ ಪ್ರೌಢ ಶಾಲೆಯಾಗಿ 1916ರಲ್ಲಿರಲ್ಲಿ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು ಅವಧಿಯಲ್ಲಿ ಆರಂಭಗೊಂಡಿದೆ ಎನ್ನುತ್ತಾರೆ ವಿದ್ಯಾರ್ಥಿ ಮುಖಂಡ ಮನೋಜ್‌.

ಈ ಕಾಲೇಜಿನಲ್ಲಿ ಓದಿದಂತಹ ಲಕ್ಷಾಂತರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಹಿತಿಗಳು, ರಾಜಕಾರಣಿಗಳು, ಅಧಿಕಾರ ಶಾಹಿ ವರ್ಗಗಳಲ್ಲಿ ಸೇವೆ ಸಲ್ಲಿಸಿದ್ದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬದುಕನ್ನು ಕಟ್ಟಿಕೊಂಡಿರುತ್ತಾರೆ. ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ. ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ ಎನ್ನುತ್ತಾರೆ ಅವರು.

ಗ್ರಾಮೀಣ, ಹಿಂದುಳಿದ, ಹಾಗೂ ದುರ್ಬಲ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಿ, ಜೀವನವನ್ನು ಕಟ್ಟಿಕೊಟ್ಟಂತಹ ಕಾಲೇಜು ಇದಾಗಿದೆ. ಪ್ರಸ್ತುತ ಸರ್ಕಾರಿ ಕಲಾ ಕಾಲೇಜಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಇದರಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಾಗಿದ್ದಾರೆ. ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಕಾಲೇಜು ಉಳಿಯಬೇಕು ಎಂಬುದು ಮನೋಜ್‌ ಅವರ ಅಭಿಪ್ರಾಯ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...