Homeಅಂತರಾಷ್ಟ್ರೀಯಅಲ್ಬೇನಿಯಾ ದಾಖಲೆ - ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

- Advertisement -
- Advertisement -

ಏಪ್ರಿಲ್ 25 ರಂದು ಯುರೋಪಿನ ದೇಶವಾದ ಅಲ್ಬೇನಿಯಾದಲ್ಲಿ ನಡೆದ ಚುನಾವಣೆಯ ನಂತರ, ಅಲ್ಲಿನ ಪ್ರಧಾನಿ ‘ಎಡಿ ರಾಮ’ ತನ್ನ ಹೊಸ ಸಚಿವ ಸಂಪುಟವನ್ನು ಘೋಷಿಸಿದ್ದಾರೆ. ತನ್ನ ಹೊಸ ತಂಡದ 16 ಹುದ್ದೆಗಳಲ್ಲಿ 12 ಸ್ಥಾನಗಳನ್ನು ಮಹಿಳೆಯರಿಗೆ ನೀಡುವ ಮೂಲಕ ದೇಶದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹೀಗಾಗಿ ಅಲ್ಬೇನಿಯಾದ ಹೊಸ ಸರ್ಕಾರದ 12 ಸಚಿವಾಲಯಗಳಿಗೆ ಎಂಟು ಮಹಿಳಾ ಮತ್ತು ನಾಲ್ಕು ಪುರುಷರು ನೇತೃತ್ವ ವಹಿಸಲಿದ್ದಾರೆ. ಕ್ಯಾಬಿನೇಟ್‌‌ ದರ್ಜೆಯಿಲ್ಲದ ಇತರ ನಾಲ್ಕು ಮಂತ್ರಿ ಸ್ಥಾನಕ್ಕೆ ಮಹಿಳೆಯರೇ ಆಯ್ಕೆಯಾಗಿದ್ದಾರೆ. ಪ್ರಧಾನಿಯಿಂದ ಆಯ್ಕೆಯಾಗಿರುವ ಒಟ್ಟು 16 ಸಚಿವರಲ್ಲಿ ನಾಲ್ವರು ಮಂತ್ರಿಗಳು ರಾಜಕೀಯ ಅನನುಭವಿಗಳಾಗಿದ್ದು, ಉಳಿದ ಸಚಿವರು ರಾಜಕೀಯದಲ್ಲಿ ಸಕ್ರಿಯರಾಗಿರುವವರಾಗಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ಮಾಜಿ ಹಣಕಾಸು ಸಚಿವರಾಗಿದ್ದ ಅರ್ಬೆನ್ ಅಹ್ಮೆತಾಜ್ ಅವರನ್ನು ದೇಶದ ಉಪ ಪ್ರಧಾನಿಯಾಗಿ ನೇಮಿಸಲಾಯಿತು. ವಿದೇಶಿ, ರಕ್ಷಣಾ, ಆಂತರಿಕ, ಮೂಲಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಮತ್ತು ಸಂಸ್ಕೃತಿ ಸಚಿವಾಲಯಗಳಿಗೆ ಓಲ್ಟಾ ಕ್ಷಾಕಾ, ನಿಕೊ ಪೆಲೆಶಿ, ಬ್ಲೆಂಡಿ ಕುಸಿ ಬೆಲಿಂಡ ಬಲ್ಲುಕು, ಒಗೆರ್ಟಾ ಮನಸ್ತಿರ್ಲಿಯು, ಇವಿಸ್ ಕುಶಿ ಮತ್ತು ಎಲ್ವಾ ಮಾರ್ಗರಿಟಿಯನ್ನು ನೇಮಿಸಲಾಗಿದೆ.

ತೆರಿಗೆ ನಿರ್ದೇಶನಾಲಯದ ಮಾಜಿ ನಿರ್ದೇಶಕರಾದ ಡೆಲಿನಾ ಇಬ್ರಾಹಿಮಿಗೆ ಹಣಕಾಸು ಖಾತೆಯನ್ನು ನೀಡಲಾಗಿದ್ದು, ಕೃಷಿಗೆ ಸಹಾಯಧನ ನೀಡುವ ಮುಖ್ಯ ಸಂಸ್ಥೆಯಾದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಏಜೆನ್ಸಿಯ ಮಾಜಿ ಮುಖ್ಯಸ್ಥೆ ಫ್ರಿಡಾ ಕ್ರಿಫ್ಕಾ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ಕಾನೂನುಗಳ ಸಂಸದೀಯ ಆಯೋಗದ ಮಾಜಿ ಮುಖ್ಯಸ್ಥ ಉಲ್ಸಿ ಮಂಜ ಅವರನ್ನು ನ್ಯಾಯಾಂಗ ಸಚಿವರನ್ನಾಗಿ ನೇಮಿಸಲಾಯಿತು. ಕ್ಯಾಬಿನೇಟ್‌‌ ದರ್ಜೆ ಇಲ್ಲದ ನಾಲ್ವರು ಮಂತ್ರಿಗಳಲ್ಲಿ ಸಂಸತ್‌ ವ್ಯವಹಾರದ ಸಚಿವೆಯಾಗಿ ಎಲಿಸಾ ಸ್ಪಿರೊಪಾಲಿ, ಉದ್ಯಮಶೀಲತೆ ರಕ್ಷಣೆಯ ಮಂತ್ರಿಯಾಗಿ ಎಡೋನಾ ಬಿಲಾಲಿ, ಸೇವೆಗಳ ಸಚಿವರಾಗಿ ಮಿಲ್ವಾ ಎಕೊನೊಮಿ ಮತ್ತು ಯುವ ಮತ್ತು ಮಕ್ಕಳ ಸಚಿವರಾಗಿ ಬೋರಾ ಮುಝಾಕಿ ನೇಮಕವಾಗಿದ್ದಾರೆ.

ಪ್ರಧಾನಿ ಇಡಿ ರಾಮ ಅವರು ದೇಶದ ಎಡಪಂಥೀಯ ಪಕ್ಷವಾದ ಸೋಷಿಯಲಿಸ್ಟ್‌ ಪಾರ್ಟಿ ಆಫ್‌ ಅಲ್ಬೇನಿಯಾದ ಅಧ್ಯಕ್ಷರೂ ಆಗಿದ್ದಾರೆ. ಅವರು 2013 ರಿಂದ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಲ್ಬೇನಿಯಾ, ಆಗ್ನೇಯ ಯುರೋಪಿನ ಬಾಲ್ಕನ್ ಪರ್ಯಾಯ ದ್ವೀಪದಲ್ಲಿರುವ ದೇಶವಾಗಿದೆ. ‘ತಿರಾನಾ’ ದೇಶದ ರಾಜಧಾನಿಯಾಗಿದ್ದು, ದೇಶವು ಅನೇಕ ಕೋಟೆಗಳು ಮತ್ತು ಪುರಾತತ್ವ ಸ್ಥಳಗಳನ್ನು ಹೊಂದಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮಲ್ಲಿ ಇನ್ನೂ ಶೇಕಡಾ ೩೩ರಶ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡಲು ಸಾಧ್ಯವಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...