Homeಅಂತರಾಷ್ಟ್ರೀಯಅಲ್ಬೇನಿಯಾ ದಾಖಲೆ - ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

- Advertisement -
- Advertisement -

ಏಪ್ರಿಲ್ 25 ರಂದು ಯುರೋಪಿನ ದೇಶವಾದ ಅಲ್ಬೇನಿಯಾದಲ್ಲಿ ನಡೆದ ಚುನಾವಣೆಯ ನಂತರ, ಅಲ್ಲಿನ ಪ್ರಧಾನಿ ‘ಎಡಿ ರಾಮ’ ತನ್ನ ಹೊಸ ಸಚಿವ ಸಂಪುಟವನ್ನು ಘೋಷಿಸಿದ್ದಾರೆ. ತನ್ನ ಹೊಸ ತಂಡದ 16 ಹುದ್ದೆಗಳಲ್ಲಿ 12 ಸ್ಥಾನಗಳನ್ನು ಮಹಿಳೆಯರಿಗೆ ನೀಡುವ ಮೂಲಕ ದೇಶದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹೀಗಾಗಿ ಅಲ್ಬೇನಿಯಾದ ಹೊಸ ಸರ್ಕಾರದ 12 ಸಚಿವಾಲಯಗಳಿಗೆ ಎಂಟು ಮಹಿಳಾ ಮತ್ತು ನಾಲ್ಕು ಪುರುಷರು ನೇತೃತ್ವ ವಹಿಸಲಿದ್ದಾರೆ. ಕ್ಯಾಬಿನೇಟ್‌‌ ದರ್ಜೆಯಿಲ್ಲದ ಇತರ ನಾಲ್ಕು ಮಂತ್ರಿ ಸ್ಥಾನಕ್ಕೆ ಮಹಿಳೆಯರೇ ಆಯ್ಕೆಯಾಗಿದ್ದಾರೆ. ಪ್ರಧಾನಿಯಿಂದ ಆಯ್ಕೆಯಾಗಿರುವ ಒಟ್ಟು 16 ಸಚಿವರಲ್ಲಿ ನಾಲ್ವರು ಮಂತ್ರಿಗಳು ರಾಜಕೀಯ ಅನನುಭವಿಗಳಾಗಿದ್ದು, ಉಳಿದ ಸಚಿವರು ರಾಜಕೀಯದಲ್ಲಿ ಸಕ್ರಿಯರಾಗಿರುವವರಾಗಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ಮಾಜಿ ಹಣಕಾಸು ಸಚಿವರಾಗಿದ್ದ ಅರ್ಬೆನ್ ಅಹ್ಮೆತಾಜ್ ಅವರನ್ನು ದೇಶದ ಉಪ ಪ್ರಧಾನಿಯಾಗಿ ನೇಮಿಸಲಾಯಿತು. ವಿದೇಶಿ, ರಕ್ಷಣಾ, ಆಂತರಿಕ, ಮೂಲಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಮತ್ತು ಸಂಸ್ಕೃತಿ ಸಚಿವಾಲಯಗಳಿಗೆ ಓಲ್ಟಾ ಕ್ಷಾಕಾ, ನಿಕೊ ಪೆಲೆಶಿ, ಬ್ಲೆಂಡಿ ಕುಸಿ ಬೆಲಿಂಡ ಬಲ್ಲುಕು, ಒಗೆರ್ಟಾ ಮನಸ್ತಿರ್ಲಿಯು, ಇವಿಸ್ ಕುಶಿ ಮತ್ತು ಎಲ್ವಾ ಮಾರ್ಗರಿಟಿಯನ್ನು ನೇಮಿಸಲಾಗಿದೆ.

ತೆರಿಗೆ ನಿರ್ದೇಶನಾಲಯದ ಮಾಜಿ ನಿರ್ದೇಶಕರಾದ ಡೆಲಿನಾ ಇಬ್ರಾಹಿಮಿಗೆ ಹಣಕಾಸು ಖಾತೆಯನ್ನು ನೀಡಲಾಗಿದ್ದು, ಕೃಷಿಗೆ ಸಹಾಯಧನ ನೀಡುವ ಮುಖ್ಯ ಸಂಸ್ಥೆಯಾದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಏಜೆನ್ಸಿಯ ಮಾಜಿ ಮುಖ್ಯಸ್ಥೆ ಫ್ರಿಡಾ ಕ್ರಿಫ್ಕಾ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ಕಾನೂನುಗಳ ಸಂಸದೀಯ ಆಯೋಗದ ಮಾಜಿ ಮುಖ್ಯಸ್ಥ ಉಲ್ಸಿ ಮಂಜ ಅವರನ್ನು ನ್ಯಾಯಾಂಗ ಸಚಿವರನ್ನಾಗಿ ನೇಮಿಸಲಾಯಿತು. ಕ್ಯಾಬಿನೇಟ್‌‌ ದರ್ಜೆ ಇಲ್ಲದ ನಾಲ್ವರು ಮಂತ್ರಿಗಳಲ್ಲಿ ಸಂಸತ್‌ ವ್ಯವಹಾರದ ಸಚಿವೆಯಾಗಿ ಎಲಿಸಾ ಸ್ಪಿರೊಪಾಲಿ, ಉದ್ಯಮಶೀಲತೆ ರಕ್ಷಣೆಯ ಮಂತ್ರಿಯಾಗಿ ಎಡೋನಾ ಬಿಲಾಲಿ, ಸೇವೆಗಳ ಸಚಿವರಾಗಿ ಮಿಲ್ವಾ ಎಕೊನೊಮಿ ಮತ್ತು ಯುವ ಮತ್ತು ಮಕ್ಕಳ ಸಚಿವರಾಗಿ ಬೋರಾ ಮುಝಾಕಿ ನೇಮಕವಾಗಿದ್ದಾರೆ.

ಪ್ರಧಾನಿ ಇಡಿ ರಾಮ ಅವರು ದೇಶದ ಎಡಪಂಥೀಯ ಪಕ್ಷವಾದ ಸೋಷಿಯಲಿಸ್ಟ್‌ ಪಾರ್ಟಿ ಆಫ್‌ ಅಲ್ಬೇನಿಯಾದ ಅಧ್ಯಕ್ಷರೂ ಆಗಿದ್ದಾರೆ. ಅವರು 2013 ರಿಂದ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಲ್ಬೇನಿಯಾ, ಆಗ್ನೇಯ ಯುರೋಪಿನ ಬಾಲ್ಕನ್ ಪರ್ಯಾಯ ದ್ವೀಪದಲ್ಲಿರುವ ದೇಶವಾಗಿದೆ. ‘ತಿರಾನಾ’ ದೇಶದ ರಾಜಧಾನಿಯಾಗಿದ್ದು, ದೇಶವು ಅನೇಕ ಕೋಟೆಗಳು ಮತ್ತು ಪುರಾತತ್ವ ಸ್ಥಳಗಳನ್ನು ಹೊಂದಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮಲ್ಲಿ ಇನ್ನೂ ಶೇಕಡಾ ೩೩ರಶ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡಲು ಸಾಧ್ಯವಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...