Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...