Homeಮುಖಪುಟರಾಜ್ಯಸಭಾ ಉಪಚುನಾವಣೆ - ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

ರಾಜ್ಯಸಭಾ ಉಪಚುನಾವಣೆ – ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ರಾಜ್ಯ ಬಿಜೆಪಿ ನಿರ್ಧಾರ ಮಾಡಿದೆ ಎಂದು ಸೋಮವಾರ ಘೋಷಿಸಿದೆ. ರಾಜ್ಯಸಭಾ ಚುನಾವಣೆಯ ಫಲಿತಾಂಶ ಮೊದಲೆ ನಿರ್ಧಾರ ಆಗಿರುವುದರಿಂದ ಈ ನಿರ್ಧಾರ ತೆಳೆಯಲಾಗಿದೆ ಎಂದು ಅದು ಹೇಳಿದೆ. ಪಕ್ಷದ ಗಮನ ಭವಾನಿಪುರ ವಿಧಾನಸಭಾ ಉಪ-ಚುನಾವಣೆಯ ಕಡೆಗೆ ಕೇಂದ್ರೀಕೃತವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗದ ಮುಖ್ಯಮಂತ್ರಿಯನ್ನು ಮತ್ತೊಮ್ಮೆ ಆಯ್ಕೆಯಾಗದ ಹಾಗೆ ಮಾಡಲು ಪಕ್ಷ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದರು ಮತ್ತು ಅಲ್ಲಿ ಅವರ ಮಾಜಿ ಆಪ್ತ ಸುವೆಂಧು ಅಧಿಕಾರಿ ವಿರುದ್ದ ಸೋಲುಂಡಿದ್ದರು. ಹೀಗಾಗಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಭವಾನಿಪುರದಲ್ಲಿ ಮತ್ತೆ ಉಪಚುನಾವಣೆಗೆ ನಿಂತಿದ್ದಾರೆ. ಅವರು ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರೆಯ ಬೇಕಾಗಿದ್ದರೆ ಈ ಚುನಾವಣೆಯಲ್ಲಿ ವಿಜಯಿಯಾಗಲೇ ಬೇಕಾಗಿದೆ.

ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ. ಫಲಿತಾಂಶವು ಪೂರ್ವನಿರ್ಧರಿತವಾಗಿದೆ. ಆಯ್ಕೆ ಆಗದ ಸಿಎಂ ಮತ್ತೊಮ್ಮೆ ಆಯ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಗಮನ ಕೇಂದ್ರೀಕೃತವಾಗಿದೆ” ಎಂದು ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ಮಮತಾ ಅವರಿಗೆ ನವೆಂಬರ್ 5 ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇರಬಹುದಾಗಿದೆ. ಹೀಗಾಗಿ ಅವರು ತಮ್ಮ ಗಡುವು ಮುಗಿಯುವುದರ ಒಳಗೆ ಭವಾನಿಪುರ ಕ್ಷೇತ್ರವನ್ನು ಗೆದ್ದು, ಅಲ್ಲಿನ ಶಾಸಕಿಯಾಗಬೇಕಾಗಿದೆ.

ಆಗಸ್ಟ್ 9 ರಂದು ನಡೆದ ರಾಜ್ಯಸಭಾ ಉಪಚುನಾವಣೆಯಲ್ಲಿ ಕೂಡಾ ಬಿಜೆಪಿ ಸ್ಪರ್ಧಿಸಿರಲಿಲ್ಲ, ಇದು ಟಿಎಂಸಿಯ ಜವಾಹರ್ ಸಿರ್ಕಾರ್ ಅವಿರೋಧವಾಗಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತ್ತು.

ಭವಾನಿಪುರ ಕ್ಷೇತ್ರವು ಬಂಗಾಳಿ ಮಾತನಾಡದ 40% ಮತದಾರರನ್ನು ಹೊಂದಿದೆ. ಉಪಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಲು ಬಿಜೆಪಿ ಈ ನಿರ್ದಿಷ್ಟ ಮತದಾರರ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಟಿಎಂಸಿಗೆ ಸೇರಿದ್ದ ಸುಶ್ಮಿತಾ ದೇವ್ ಅವರನ್ನು ಪಕ್ಷವು ರಾಜ್ಯಸಭಾ ಉಪಚುನಾವಣೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯಸಭಾ ಸದಸ್ಯನಾಗಿದ್ದ ಟಿಎಂಸಿ ನಾಯಕ ಮಾನಸ್ ಭುನಿಯಾ ಅವರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದರು. ಹೀಗಾಗಿ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ರಾಜ್ಯ ಸಭಾ ಸ್ಥಾನ ತೆರವುಗೊಂಡಿತ್ತು. ಬಂಗಾಳದಲ್ಲಿ ಇರುವ 16 ರಾಜ್ಯಸಭಾ ಸ್ಥಾನಗಳಲ್ಲಿ 11 ಟಿಎಂಸಿ ಪಕ್ಷದಲ್ಲಿದೆ. ಕಾಂಗ್ರೆಸ್ ಎರಡು ಮತ್ತು ಸಿಪಿಐ (ಎಂ) ಒಂದು ಸ್ಥಾನಗಳನ್ನು ಹೊಂದಿದೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ. ಟಿಎಂಸಿಯಿಂದ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಸ್ಪರ್ಧಿಸುತ್ತಿರುವುದರಿಂದ ಕ್ಷೇತ್ರವು ದೇಶದ ಗಮನ ಸೆಳೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ವಿರುದ್ದ ಬಿಜೆಪಿಯಿಂದ ಸ್ಪರ್ಧಿಸಿರುವ ಟಿಬ್ರೆವಾಲ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಟಿಬ್ರೆವಾಲ್ ಅವರು, ವಿಧಾನಸಭಾ ಚುನಾವಣೆಯ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿದ ಅರ್ಜಿದಾರರಲ್ಲಿ ಒಬ್ಬರಾಗಿದ್ದಾರೆ.

ಸಿಪಿಐಎಂ ಭವಾನಿಪುರದಲ್ಲಿ ಮಮತಾ ವಿರುದ್ದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ ಸ್ಪರ್ಧಿಸದೆ ಇರಲು ನಿರ್ಧರಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...