Homeಮುಖಪುಟಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

- Advertisement -
- Advertisement -

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ವರದಿಯಲ್ಲಿ ಮತ್ತು ಜೂತೆಗೆ
    ಬಹಳವಾಗಿ advertisement ಬರಲಾರಂಬಿಸಿವೆ.
    ಅಪ್ಪಿ ತಪ್ಪೀ touch ಆದರೆ ಸಾಕು ನಿಮ್ಮ permanent ಆಗಿ ಹೊರಗಡೆ ಹೋಗಿಬಿಡುತ್ತೇವೆ.
    ಇದು ಒಳ್ಳೆಯ ಬೆಳವಣಿಗೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...