Homeಮುಖಪುಟಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

- Advertisement -
- Advertisement -

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ವರದಿಯಲ್ಲಿ ಮತ್ತು ಜೂತೆಗೆ
    ಬಹಳವಾಗಿ advertisement ಬರಲಾರಂಬಿಸಿವೆ.
    ಅಪ್ಪಿ ತಪ್ಪೀ touch ಆದರೆ ಸಾಕು ನಿಮ್ಮ permanent ಆಗಿ ಹೊರಗಡೆ ಹೋಗಿಬಿಡುತ್ತೇವೆ.
    ಇದು ಒಳ್ಳೆಯ ಬೆಳವಣಿಗೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...