Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...