Homeಕರ್ನಾಟಕತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

- Advertisement -
- Advertisement -

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

ಡಾ.ರಾಜ್‌‌ಕುಮಾರ್‌ ಕುಟುಂಬಕ್ಕೆ ಆಪ್ತವಾದ ಚಿತ್ರಮಂದಿರವೆಂದೇ ಖ್ಯಾತವಾಗಿದ್ದ, ಮೈಸೂರು ಅತಿದೊಡ್ಡ ಚಿತ್ರಮಂದಿರವೆಂದೂ ಕರೆಸಿಕೊಂಡಿರುವ ಸರಸ್ವತಿ ಚಿತ್ರಮಂದಿರವನ್ನು ಮುಚ್ಚುವುದಾಗಿ ಚಿತ್ರಮಂದಿರದ ಮಾಲೀಕ ನಾರಾಯಣ್‌ ಹೇಳಿದ್ದಾರೆ.

ಒಂದೂವರೆ ವರ್ಷಗಳಲ್ಲಿ ನೇಪಥ್ಯಕ್ಕೆ ಸರಿದ ಚಿತ್ರಮಂದಿರಗಳಲ್ಲಿ ಸರಸ್ವತಿ ಚಿತ್ರಮಂದಿರ ಮೂರನೇಯದಾಗಿದ್ದು, ಈ ಮೊದಲು ಶಾಂತಲಾ ಹಾಗೂ ಲಕ್ಷ್ಮಿ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ.

ಸ್ಥಳೀಯ ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿರುವ ನಾರಾಯಣ್‌, “ಕೊರೊನಾ ಆರಂಭವಾದಾಗಿನಿಂದ ಚಿತ್ರಮಂದಿರದಿಂದ ಯಾವುದೇ ಆದಾಯವಿಲ್ಲ. ಕಾರ್ಪೋರೇಷನ್‌ ತೆರಿಗೆ ಹೆಚ್ಚಾಗಿದೆ. ಸೂಪರ್‌ ಕಮರ್ಷಿಯಲ್‌ ಎಂದು ತೆರಿಗೆ ವಿಧಿಸುತ್ತಿದ್ದಾರೆ. ವರ್ಷಕ್ಕೆ ನಾಲ್ಕೂವರೆ ಲಕ್ಷ ರೂ. ತೆರಿಗೆ ಕಟ್ಟಬೇಕು ಎಂದರೆ ಹುಡುಗಾಟವೇ” ಎಂದು ಕೇಳಿದ್ದಾರೆ.

“ನಾವು ಪಾಲುದಾರರೇ  ಅಷ್ಟೊಂದು ಹಣವನ್ನು ತೆಗೆದುಕೊಂಡು ಹೋಗುವುದಿಲ್ಲ. ಜಿಎಸ್‌‌ಟಿ ಟ್ಯಾಕ್ಸ್‌‌ ಕೋಟಿಗಟ್ಟಲೆ ಕಟ್ಟಿದ್ದೇವೆ. ಮನರಂಜನಾ ಟ್ಯಾಕ್ಸ್‌ ಇದ್ದಾಗ ಕೋಟಿಗಟ್ಟಲೆ ಕಟ್ಟಿದ್ದೇವೆ.  ಅಷ್ಟು ದೊಡ್ಡ ಸಂಸ್ಥೆಯನ್ನು ಮುಚ್ಚುವುದು ನಮಗೂ ಬೇಸರ ತಂದಿದೆ” ಎಂದಿದ್ದಾರೆ.

ಚಿತ್ರಮಂದಿರದ ಪಾಲುದಾರರಾಗಿರುವ ಮತ್ತೊಬ್ಬರು ನಾರಾಯಣ್ ಅವರ ನಿರ್ಧಾರವನ್ನು ವಿರೋಧಿಸಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಸಾಲು ಸಾಲು ಚಿತ್ರಮಂದಿರಗಳು ಮುಚ್ಚುತ್ತಿರುವುದನ್ನು ನೋಡಿದರೆ, ಚಿತ್ರಮಂದಿರಗಳನ್ನೇ ನಂಬಿಕೊಂಡಿದ್ದ ಜನರ ಪಾಡು ಏನಾಗಬೇಕು ಎಂಬುದನ್ನು ಸರ್ಕಾರ ಯೋಚಿಸಬೇಕು ಎನ್ನುತ್ತಾರೆ ಚಿತ್ರಮಂದಿರಗಳ ಮಾಲೀಕರು.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ನಾರಾಯಣ್‌, “ಒಂದೂವರೆ ವರ್ಷ ಯಾವುದೇ ಆದಾಯವಿಲ್ಲದಿದ್ದರೂ ಇಲ್ಲಿನ ಸಿಬ್ಬಂದಿಗೆ ಸಂಬಳ ನೀಡಿದ್ದೇವೆ. ನಾವು ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರ ಸ್ಪಂದಿಸುತ್ತಿಲ್ಲ” ಎಂದರು.


ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...