Homeಕರ್ನಾಟಕತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

- Advertisement -
- Advertisement -

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

ಡಾ.ರಾಜ್‌‌ಕುಮಾರ್‌ ಕುಟುಂಬಕ್ಕೆ ಆಪ್ತವಾದ ಚಿತ್ರಮಂದಿರವೆಂದೇ ಖ್ಯಾತವಾಗಿದ್ದ, ಮೈಸೂರು ಅತಿದೊಡ್ಡ ಚಿತ್ರಮಂದಿರವೆಂದೂ ಕರೆಸಿಕೊಂಡಿರುವ ಸರಸ್ವತಿ ಚಿತ್ರಮಂದಿರವನ್ನು ಮುಚ್ಚುವುದಾಗಿ ಚಿತ್ರಮಂದಿರದ ಮಾಲೀಕ ನಾರಾಯಣ್‌ ಹೇಳಿದ್ದಾರೆ.

ಒಂದೂವರೆ ವರ್ಷಗಳಲ್ಲಿ ನೇಪಥ್ಯಕ್ಕೆ ಸರಿದ ಚಿತ್ರಮಂದಿರಗಳಲ್ಲಿ ಸರಸ್ವತಿ ಚಿತ್ರಮಂದಿರ ಮೂರನೇಯದಾಗಿದ್ದು, ಈ ಮೊದಲು ಶಾಂತಲಾ ಹಾಗೂ ಲಕ್ಷ್ಮಿ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ.

ಸ್ಥಳೀಯ ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿರುವ ನಾರಾಯಣ್‌, “ಕೊರೊನಾ ಆರಂಭವಾದಾಗಿನಿಂದ ಚಿತ್ರಮಂದಿರದಿಂದ ಯಾವುದೇ ಆದಾಯವಿಲ್ಲ. ಕಾರ್ಪೋರೇಷನ್‌ ತೆರಿಗೆ ಹೆಚ್ಚಾಗಿದೆ. ಸೂಪರ್‌ ಕಮರ್ಷಿಯಲ್‌ ಎಂದು ತೆರಿಗೆ ವಿಧಿಸುತ್ತಿದ್ದಾರೆ. ವರ್ಷಕ್ಕೆ ನಾಲ್ಕೂವರೆ ಲಕ್ಷ ರೂ. ತೆರಿಗೆ ಕಟ್ಟಬೇಕು ಎಂದರೆ ಹುಡುಗಾಟವೇ” ಎಂದು ಕೇಳಿದ್ದಾರೆ.

“ನಾವು ಪಾಲುದಾರರೇ  ಅಷ್ಟೊಂದು ಹಣವನ್ನು ತೆಗೆದುಕೊಂಡು ಹೋಗುವುದಿಲ್ಲ. ಜಿಎಸ್‌‌ಟಿ ಟ್ಯಾಕ್ಸ್‌‌ ಕೋಟಿಗಟ್ಟಲೆ ಕಟ್ಟಿದ್ದೇವೆ. ಮನರಂಜನಾ ಟ್ಯಾಕ್ಸ್‌ ಇದ್ದಾಗ ಕೋಟಿಗಟ್ಟಲೆ ಕಟ್ಟಿದ್ದೇವೆ.  ಅಷ್ಟು ದೊಡ್ಡ ಸಂಸ್ಥೆಯನ್ನು ಮುಚ್ಚುವುದು ನಮಗೂ ಬೇಸರ ತಂದಿದೆ” ಎಂದಿದ್ದಾರೆ.

ಚಿತ್ರಮಂದಿರದ ಪಾಲುದಾರರಾಗಿರುವ ಮತ್ತೊಬ್ಬರು ನಾರಾಯಣ್ ಅವರ ನಿರ್ಧಾರವನ್ನು ವಿರೋಧಿಸಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಸಾಲು ಸಾಲು ಚಿತ್ರಮಂದಿರಗಳು ಮುಚ್ಚುತ್ತಿರುವುದನ್ನು ನೋಡಿದರೆ, ಚಿತ್ರಮಂದಿರಗಳನ್ನೇ ನಂಬಿಕೊಂಡಿದ್ದ ಜನರ ಪಾಡು ಏನಾಗಬೇಕು ಎಂಬುದನ್ನು ಸರ್ಕಾರ ಯೋಚಿಸಬೇಕು ಎನ್ನುತ್ತಾರೆ ಚಿತ್ರಮಂದಿರಗಳ ಮಾಲೀಕರು.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ನಾರಾಯಣ್‌, “ಒಂದೂವರೆ ವರ್ಷ ಯಾವುದೇ ಆದಾಯವಿಲ್ಲದಿದ್ದರೂ ಇಲ್ಲಿನ ಸಿಬ್ಬಂದಿಗೆ ಸಂಬಳ ನೀಡಿದ್ದೇವೆ. ನಾವು ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರ ಸ್ಪಂದಿಸುತ್ತಿಲ್ಲ” ಎಂದರು.


ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...