Homeಮುಖಪುಟಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -
- Advertisement -

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಹಿಂದೂ ಮತ ಬ್ಯಾಂಕ್ ಸೆಳೆಯುವ ಹುನ್ನಾರ ಎಂದು ಟೀಕಿಸಿದೆ. ಬಿಜೆಪಿಯ ಇಬ್ಬಂದಿತನದ ಕುರಿತು ಚರ್ಚೆಯಾಗಬೇಕು ಎಂದಿದೆ.

2009ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಅನ್ವಯ ಅನಧಿಕೃತ ದೇವಾಲಯಗಳನ್ನು ತೆರವು ಮಾಡಬೇಕಿದೆ. ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿನ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸಲಾಗುವುದು. ಆದರೆ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಇನ್ನು ಮುಂದೆ ನಿರ್ಮಿಸುವಂತಿಲ್ಲ ಎಂದು ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಮಸೂದೆ 2021′ ಹೇಳಿದೆ. ಕೋರ್ಟ್‌ ತೀರ್ಪು ಬಳಿಕ ಈಗ ಸರ್ಕಾರವು “ಸರ್ಕಾರದ ನಿಯಮಗಳಿಗೆ ಅನುಸಾರ ಇರುವ ಧಾರ್ಮಿಕ ಕಟ್ಟಡಗಳಿದ್ದರೆ ಅವುಗಳನ್ನು ತೆರವುಗೊಳಿಸಬಾರದು. ಸರ್ಕಾರದ ನಿಯಮಗಳಿಗೆ ಒಳಪಡದ ಧಾರ್ಮಿಕ ಕಟ್ಟಡಗಳನ್ನು ತೆರೆವು ಮಾಡಬಹುದು” ಎಂದು ಹೊಸ ಮಸೂದೆಯಲ್ಲಿ ಹೇಳಿದೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್‌, “ಇದು ಬಿಜೆಪಿಯ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗ. ದೇವಾಲಯವನ್ನು ಉರುಳಿಸುವವರು ಇವರೇ, ಅವುಗಳನ್ನು ರಕ್ಷಿಸುವವರು ಇವರೇ. ಇದು ಮತಬ್ಯಾಂಕ್‌ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಈ ವಿಚಾರ ಕುರಿತು ಚರ್ಚೆ ನಡೆಯಬೇಕು” ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂಜನಗೂಡಿನ ದೇವಾಲಯ ನೆಮಸಮವಾಗುತ್ತಿದ್ದಂತೆ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ಹಿಂದೂ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗವಾಗಿರುವ ಸಂಘಟನೆಗಳು ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. “ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಈ ಪ್ರಕರಣ ಬೇರೆಯೇ ಸ್ವರೂಪ ಪಡೆಯುತ್ತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಒಂದು ವಿಚಾರವಾಗಿ ಮಾತನಾಡುತ್ತಾ ಬೆಂಕಿ ಹಚ್ಚುವ ಮಾತನಾಡಿದ್ದರು. ಇಂದು ಏನಾದರೂ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಅದು ಅಕ್ಷರಶಃ ಆಗುತ್ತಿತ್ತು” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧಮೇಂದ್ರ ಹೇಳಿಕೆ ನೀಡಿದ್ದರು. ಅಲ್ಲದೇ ಗಾಂಧಿಯನ್ನೇ ಬಿಟ್ಟಿಲ್ಲ ನಾವು, ಇನ್ನು ನೀವು ಯಾವ ಲೆಕ್ಕ ಎಂದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದರಿಂದ ಧರ್ಮಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು- ಕೊಡಗು ಲೋಕಸಭಾ ಸಂಸದ ಪ್ರತಾಪ್‌ ಸಿಂಹ, ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ, ಮೈಸೂರು ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡಿದ್ದರು. ಹಿಂದೂ ದೇವಾಲಯಗಳ ತೆರವು ಮಾಡಬಾರದು ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಬಿಜೆಪಿ ಇತರ ನಾಯಕರು ದೇವಾಲಯ ತೆರವು ವಿರೋಧಿಸಿದ್ದರು. ಹಿಂದೂ ಮತಬ್ಯಾಂಕ್‌ ರಾಜಕಾರಣ ಮಾಡುವ ಬಿಜೆಪಿ, ಹಿಂದೂಗಳ ದೇವಾಲಯಗಳನ್ನು ತೆರವು ಮಾಡುತ್ತಿದೆ ಎಂದು ಪ್ರತಿಪಕ್ಷಗಳೂ ಟೀಕಿಸಿದ್ದವು.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಮುಖ್ಯಮಂತ್ರಿಯವರು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ತನ್ನ ಹಿಂದೂ ಮತ ಬ್ಯಾಂಕ್ ಸಿಡಿದೆದ್ದಿದ್ದನ್ನು ಗಮನಿಸಿದ ಸರ್ಕಾರ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಮಂಡಿಸಿದೆ. ಈ ಕುರಿತು ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ದೇವಾಲಯಗಳನ್ನು ಒಡೆಯಬೇಕು ಎಂಬ ನಿರ್ಧಾರವನ್ನು ಸರ್ಕಾರ ಈ ಹಿಂದೆ ಎಂದೂ ತೆಗೆದುಕೊಂಡಿಲ್ಲ. ಈಗಲೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಿರುವ ಹಿಂದೂ ಮತಗಳ ಧ್ರುವೀಕರಣ ಹೇಗೆ ಸಾಧ್ಯವಾಗುತ್ತದೆ?” ಎಂದು ಕೇಳುತ್ತಾರೆ.

“ಅನೇಕ ಘಟನೆಗಳು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಹೀಗಾಗಿ ನಂಜನಗೂಡಿನ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆದದ್ದು ಹೇಗೆ ಎಂಬುದು ತನಿಖೆಯಾಗಬೇಕು. ಸರ್ಕಾರ ಮಂಡಿಸಿರುವ ಹೊಸ ಮಸೂದೆಯಲ್ಲಿ ಮಂದಿರ, ಮಸೀದಿ, ಚರ್ಚ್‌ ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆ ಇದೆ. ಹೀಗಾಗಿ ಎಲ್ಲ ಪಕ್ಷಗಳೂ ಸುಮ್ಮನಾಗಿವೆ” ಎನ್ನುತ್ತಾರೆ ರವಿಕುಮಾರ್‌.

ಈ ವಿಚಾರದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟವಾಗಿ ಮಾತನಾಡಿದ್ದಾರೆ. ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ಸ್ಥಳೀಯ ಜನರೊಂದಿಗೆ ಮಾತನಾಡಬೇಕು. ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಬೇಕು ಎಂದಿದ್ದಾರೆ. ಜನರು ಮತ್ತೊಂದು ದೇವಾಲಯ ಕಟ್ಟಬೇಕೆಂದು ಬಯಸಿದರೆ, ಅದಕ್ಕೆ ಅವಕಾಶ ನೀಡಬೇಕು ಅಲ್ಲವೇ? ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಅದು ಚರ್ಚೆ ಆಗಬೇಕಿದೆ” ಎಂದರು.

ಹಿಂದೂ ಮತಗಳ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಭಾವನಾತ್ಮಕ ವಿಚಾರಗಳಲ್ಲಿ ಯಾವುದೇ ಪಕ್ಷವೂ ವೈಚಾರಿಕ ನಿಲುವು ತಾಳುವುದು ಕಷ್ಟ. ನ್ಯಾಯಾಂಗದ ನಿಲುವನ್ನು ಸಮರ್ಥಿಸುವುದು ಆಡಳಿತ ಹಾಗೂ ವಿರೋಧ ಪಕ್ಷಗಳೆರಡಕ್ಕೂ ಕಷ್ಟವಾಗುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...